Advertisement
ಅಜಯ್ ವರ್ಮಾ ಅಲ್ಲೂರಿ ಬರೆದ ಈ ದಿನದ ಕವಿತೆ

ಅಜಯ್ ವರ್ಮಾ ಅಲ್ಲೂರಿ ಬರೆದ ಈ ದಿನದ ಕವಿತೆ

ನೀನು –
ಮೋಡದ ಗೂಡೊಳಗಿಂದ
ಬುಸುಗುಡುವ ಹಾವು-
ಧಕ್ಕನೆ ನೆಲಕ್ಕುದುರುವ
ಪದರು ಪದರು ಸದ್ದು.
ತೀರವಿರದ ನೀರಮೈ ಸವರಿ
ಮೇಲಕ್ಕಾರಿ ಮಾಯವಾದ
ರಂಗಿಲ್ಲದ ರಣಹದ್ದು.

ನೀನೆಯೇನು –
ಜಾಡುತಪ್ಪಿದ ಕಾಡನವಿಲ
ಕೊರಳ ಕೂದಲ ಬಣ್ಣಹೀರಿ
ಬಿಳಿ ಬೆರಸಿ ತಿಳಿಯಾಗಿಸಿದ್ದು ?
ಅದರಿಂದ-
ಬಾನಿಗೆ ಬಣ್ಣ ಬಳಿದದ್ದು ?
ನೀರಲ್ಲಿ ನೀಲಿಚೆಲ್ಲಿದ್ದು ?

 

ವಿಜ್ಞಾನದ ವಿದ್ಯಾರ್ಥಿಯಾದ ಅಜಯ್ ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರಿನವರು.
ಕ್ರೈಸ್ಟ್ ಕಾಲೇಜಿನ ಬೇಂದ್ರೆ ಕಾವ್ಯ ಸ್ಪರ್ಧೆ, ಅ.ನ.ಕೃ ಕಥಾ ಸ್ಪರ್ಧೆಗಳಲ್ಲಿ ಬಹುಮಾನಿತರು.
‘ಗಗನಸಿಂಧು’, (ಕಾವ್ಯ) ‘ಡಯಾನಾ ಮರ’, ‘ಕಲಲ ಕನ್ನೀಟಿ ಪಾಟ’, ‘ವಿಮುಕ್ತೆ’ (ಅನುವಾದ) ಪ್ರಕಟಿತ ಕೃತಿಗಳು.
ಸದ್ಯ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿ ಎಂ.ಎಸ್ಸಿ (ಭೌತಶಾಸ್ತ್ರ) ಓದುತ್ತಿದ್ದಾರೆ.

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ