Advertisement
ಪೂರ್ಣಿಮಾ ಸುರೇಶ್ ಈ ದಿನದ ಕವಿತೆ: ಗಾಜಿನ ಬಳೆಯ ತುಂಡು ಮಾತು

ಪೂರ್ಣಿಮಾ ಸುರೇಶ್ ಈ ದಿನದ ಕವಿತೆ: ಗಾಜಿನ ಬಳೆಯ ತುಂಡು ಮಾತು

ಗಾಜಿನ ಬಳೆಯ ತುಂಡು ಮಾತು

ಮೈಗೆ ಹತ್ತಿ
ರೂಪವನೇ ನೀಗಿಸಿಬಿಡುವ
ಬೆಂಕಿಯ
ಒಡನಾಟದಲ್ಲಿ ಬಣ್ಣ
ರೂಪ ತಳೆದ
ಬಳೆಗಳು
ಅರ್ತಿಯಿಂದ ಕಾಯುತ್ತವೆ
ಬೆಂಕಿಯು ಬೆಳಗುವ
ದೀಪವಾಗುವ ಘಳಿಗೆಗಳಿಗೆ

ಹೊರಳಿ ಹೊರಳಿ ಹೊರ ನೆಗೆದು
ಘನಗಟ್ಟಿಯಾಗುವ ಅಸ್ಮಿತೆ

ಒರಟುತನಕ್ಕೆ
ಒಡೆಯಬಲ್ಲದು
ಬಿರುಕಿನ ಗೆರೆ
ತುಂಡಾಗಿ
ಎಸೆದು ಬಿಟ್ಟಾಗ

ಮಿಡುಕುವ
ಪ್ರಾಣ ವಿರಮಿಸದೆ
ಕಾಯುತ್ತದೆ
ನೇವರಿಕೆಗೆ
ಹೆಬ್ಬೆರಳು ತೋರು ಬೆರಳುಗಳ
ನಡುವೆ ಹೆಣ
ಗಾಡಿ
ಸಂಧಾನ
ಅನುಸಂಧಾನ

ಈಗ ಒಡ್ಡಿಕೊಳ್ಳಬೇಕು
ನಿರ್ಭಿಡೆಯಿಂದ ಕಾವಿಗೆ
ಉರಿಯ ಗರಿಷ್ಠ ಬಿಂದುವಿನ
ಕಡೆಗೆ ಆತ್ಮವನೇ ಬಾಗಿಸಿ
ಕಿಚ್ಚಿನ ಕುಡಿಯ ಚುಂಬನ
ತಾಕಿದ ಮೈಯೇ ಕಿಚ್ಚಾಗಿ
ಬಾಗುತ್ತ ಬಿರಿಯುತ್ತ
ಸಂಕುಚಿಸಿ ವಿಕಸಿಸಿ

ರೂಪ ರೂಪಗಳಾಚೆ ಲಂಘಿಸಿ
ರೂಪು ಮಾಯೆಗೆ
ಕೊಂಡಿ ಕೊಂಡಿ ಕೂಡಿ
ಸರಪಳಿಯಾಗುತ್ತ
ಕೃತಿ ಆಕೃತಿಯಾಗಿ

ಕೈಗಳ ಕನಸಿಲ್ಲ
ಮುದ್ದಿನ ಬಯಕೆಯಿಲ್ಲ
ಆದೀತು ಏನಾದರೂ
ಮನೆ ಮಕ್ಕಳ ಆಟಿಕೆ
ದೇವರ ಮನೆ ಬಾಗಿಲಿನ
ಶೃಂಗಾರ

ಕನಸಿದ ಬಳೆಗಳದೇ
ಒಡೆದ ಸೊಲ್ಲು‌

ಕವಯತ್ರಿ ಪೂರ್ಣಿಮಾ ಸುರೇಶ್ ಅವರು ಮೂಲತಃ ಉಡುಪಿಯವರು
ರಂಗ ಮತ್ತು ಧಾರಾವಾಹಿಯ ಕಲಾವಿದೆಯೂ ಆಗಿರುವ ಪೂರ್ಣಿಮಾ ಅವರಿಗೆ ಸಾಹಿತ್ಯದಲ್ಲೂ ಅಪಾರ ಆಸಕ್ತಿ

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

1 Comment

  1. Smitha Amrithraj.

    ಚೆನ್ನಾಗಿದೆ ಕವಿತೆ ಪೂರ್ಣಿಮಾ

    Reply

Leave a comment

Your email address will not be published. Required fields are marked *

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ