Advertisement

Month: January 2025

ವೇಗಸ್ಸಿನಿಂದ ವಿಂಬಲ್ಡನ್‌ವರೆಗೆ: ಅಚಲ ಸೇತು ಬರಹ

ಫ್ರೆಂಚ್‌ ಓಪನ್ ಪಂದ್ಯಾವಳಿಯ ಕಡೆಯ ಆಟದಲ್ಲಿ ಅದೇನಾಯಿತೋ ಏನೋ ಟೋಫನ್ ಸರಿಯಾಗೇ ಕೂರದೆ ಕೆಳಗೆ ಜಾರುವಂತಾಗುತ್ತಿತ್ತು. ಪ್ರಾಣಪದಕವಾಗಿದ್ದ ತನ್ನ ಇಮೇಜನ್ನು ಕಾಪಾಡಿಕೊಳ್ಳುವ ಸಲುವಾಗಿ ಅತ್ತಿಂದಿತ್ತ ಜೋರಾಗಿ ಓಡಾಡಲು ಹೆದರಿ ಪ್ರತಿಷ್ಠಿತ ಚಾಂಪಿಯನ್ಷಿಪ್ಪನ್ನೇ ಕೈಬಿಟ್ಟಿದ್ದ! ಅದು ಅಂದಿನ ಕತೆ. ಗಂಭೀರವಾದ ಮನ ಮಂಥನದ ಮೂಲಕ ತನ್ನತನವ ಅಪ್ಪಿಕೊಳ್ಳುವ ಪ್ರಕ್ರಿಯೆಯ ಭಾಗವಾಗಿ ಅಳಿದುಳಿದ ಕೂದಲಿನ ಬೊಕ್ಕ ತಲೆಯನ್ನು ಚೊಕ್ಕವಾಗಿ ಬೋಳಿಸಿಕೊಂಡು ಸಾರ್ವಜನಿಕವಾಗಿ ಓಡಾಡತೊಡಗಿದ.
ಟೆನ್ನಿಸ್‌ ತಾರೆ ಲಾಸ್‌ ವೇಗಸ್‌ ಮೂಲದ ಆಂಡ್ರೆ ಅಗಸಿಯ ಕುರಿತ ಅಚಲ ಸೇತು ಬರಹ ನಿಮ್ಮ ಓದಿಗೆ

Read More

ನಡು ಮಧ್ಯಾಹ್ನದ ಕಣ್ಣಿನ ಕಾವ್ಯ…: ವಿ.ಚಂದ್ರಶೇಖರ ನಂಗಲಿ ಬರಹ

‘ಅಡುಗೆಯಾಟದ ಹುಡುಗಿ’ ಬಾಲ್ಯದ ಅಡುಗೆಯಾಟವೇ ಕ್ರಮೇಣ ಆ ಹುಡುಗಿಯ ಜೀವನಶೈಲಿಯಾಗಿ ಬದಲಾಗುವ ಮತ್ತು ವ್ಯಕ್ತಿತ್ವ ವಿಕಸನದ ಅವಕಾಶಗಳು ಮುಚ್ಚಿಹೋಗುವ ಬಗೆಯೊಂದು ಅನಾವರಣಗೊಳ್ಳುತ್ತಾ , ಕಡೆಗೆ ಅಮ್ಮನಿಂದ ಮಗಳಿಗೆ ಹಸ್ತಾಂತರವಾಗುವ “ಚುಚ್ಚುಗ”ವು ಬರಿಯ ಅಡುಗೆಯ ಆಯುಧವಾಗಿ ಉಳಿಯದೆ, ಹೆಣ್ಣಿನ ಪಾಲಿಗೆ ಪುರುಷ ಪ್ರಧಾನ ಸಮಾಜದ “ಚುಚ್ಚುಗ”ವಾಗುವ ರೂಪಕ ಆಗಿಬಿಡುತ್ತದೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಡಾ. ವಿ.ಚಂದ್ರಶೇಖರ ನಂಗಲಿ ಬರಹ

Read More

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ಅಮೆರಿಕದ ಥೇಟರಿನಲ್ಲಿ ಬ್ಯಾಟರಿ ಬಿಟ್ಟ ಕತೆ!: ಗುರುಪ್ರಸಾದ ಕುರ್ತಕೋಟಿ ಸರಣಿ

ಒಂದು ಎಡವಟ್ಟಾಗಿತ್ತು! ನಾನು ಹಳೆಯ, ಕಮಲ್ ಹಾಸನ್ ನಟಿಸಿದ್ದ ಪುಷ್ಪಕ ವಿಮಾನದಂತೆಯೇ ಇದು ಕೂಡ ತಮಾಷೆಯಾಗಿಯೇ ಇರಬಹುದು ಅಂದುಕೊಂಡಿದ್ದೆ. ಆದರೆ ಇದು ಅಪ್ಪ ಮಗಳ ನಡುವೆ ಪ್ರೀತಿ ವಾತ್ಸಲ್ಯದ ಬಗ್ಗೆ ಕೇಂದ್ರಿತವಾಗಿದ್ದು, ಕತೆಯಲ್ಲಿ ಬಹಳಷ್ಟು ಭಾವನಾತ್ಮಕ ಘಟನೆಗಳು ಇದ್ದವು. ಸ್ವಲ್ಪ ಸಮಯದಲ್ಲೇ ಅತ್ತಿತ್ತ ಗಮನಿಸಲು ಶುರು ಮಾಡಿದರೆ ಎಷ್ಟೋ ಹೆಣ್ಣು ಮಕ್ಕಳು ಕಣ್ಣೀರು ಹಾಕಲು ಶುರು ಮಾಡಿದ್ದರು. ಇತ್ತೀಚೆಗಷ್ಟೇ ಅಪ್ಪನನ್ನು ಕಳೆದುಕೊಂಡಿದ್ದ ನನ್ನ ಹೆಂಡತಿ ಕೂಡ ಗೊಳೋ ಅಂತ ಅಳಲು ಶುರು ಮಾಡಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ