Advertisement

Month: January 2025

ಇಸ್ಕೂಲ್ ಅನ್ನೋ ವಿಸ್ಮಯಲೋಕ: ಸುಮಾ ಸತೀಶ್ ಸರಣಿ

ಶಾಲೆ ಹಿಂಭಾಗದಲ್ಲಿ ಆಟದ ಮೈದಾನವಿತ್ತು. ಸಂಜೆ ಶಾಲೆ ಬಿಟ್ಟ ಮೇಲೆ ಮನೇಲಿ ಚೀಲ ಇಟ್ಟು, ಒಂದಿಬ್ಬರು ಗೆಳತೀರ ಜೊತೆ ಮತ್ತೆ ಇಸ್ಕೂಲಿಗೆ ಬಂದು ಹಳದಿ ಪಟುಕದ ಮೊಗ್ಗು ಕೀಳೋದು. ನಮ್ ತೋಟ್ದಲ್ಲಿ ತರಹೇವಾರಿ ಹೂವಿನ ಗಿಡವಿದ್ರೂ ಇದ್ರ ಮೇಲೇ ಕಣ್ಣು. ಪೈಪೋಟಿ ಮೇಲೆ ಮೊಗ್ಗು ಕೊಯ್ಯೋದು. ಗಿಡದ ತುಂಬಾ ಮುಳ್ಳುಗಳು. ‌ಕೈ ಎಲ್ಲ ತರಚಿ ಹೋಗ್ತಿತ್ತು. ಅದರ ನೆದರೇ ಇರ್ತಿರಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಶಾಲಾದಿನಗಳ ಕುರಿತ ಬರಹ

Read More

ಕೂರಾಪುರಾಣ ೫: ಸೂಜಿಗಳು ಮತ್ತು ಸಂಕಷ್ಟಗಳು

ಲೀಶ್ ಹಾಕಿ ಸೂಜಿ ಚುಚ್ಚುವುದಿಲ್ಲ ಎಂದು ಅವನಿಗೆ ತಿಳಿಯುವ ಹಾಗೆ ನಯವಾಗಿ ವರ್ತಿಸುತ್ತ ನಿಧಾನವಾಗಿ ಲೀಶ್ ಅಭ್ಯಾಸ ಮಾಡಿಸಲು ಸುಮಾರು ಮೂರು ತಿಂಗಳುಗಳೇ ಹಿಡಿಯಿತು. ನಾಯಿಗಳ ಮನಸ್ಸಿನಲ್ಲಿ ಯಾವುದರ ಬಗ್ಗೆಯಾದರು ಭಯ ಕೂತು ಬಿಟ್ಟರೆ ಅವುಗಳಿಗೆ ಆ ವಿಷಯದ ಬಗ್ಗೆ ಅದೆಷ್ಟು ಭಯವಿರುತ್ತದೆ ಎಂದು ಗೊತ್ತಾಗಿದ್ದು ಆಗಲೇ. ಚಿಕ್ಕವರಿದ್ದಾಗ ನಾಯಿಯ ಬಾಲಕ್ಕೆ ಹುಡುಗರು ಪಟಾಕಿ ಕಟ್ಟಿ ಅದು ಸಿಡಿದಾಗ ಕುಂಯ್ಯ ಕುಂಯ್ಯ ಎಂದು ಓಡಿ ಹೋದದ್ದು, ಅದನ್ನು ನೋಡಿ ನಾವು ನಕ್ಕಿದ್ದನ್ನೆಲ್ಲ ನೆನೆದು ಅದೆಷ್ಟು ಪ್ರಾಣಿಗಳು ನಮ್ಮಿಂದ ಹಿಂಸೆ ಪಟ್ಟಿವೆಯೋ ಎನ್ನಿಸುತ್ತದೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಅಡ್ಡ ಹೆಸರಿನ ಅವಾಂತರಗಳು: ಅನುಸೂಯ ಯತೀಶ್ ಸರಣಿ

ನನ್ನ ಮನದಿಂಗಿತವನ್ನು ಅರಿತ ಅವರು ಅಲ್ರೀ ಈ ಮಕ್ಕಳು ನಮಗೆಲ್ಲ ಎಷ್ಟು ಚಂದ ಚಂದ ಅಡ್ಡ ಹೆಸರುಗಳನ್ನು ಇಟ್ಟು ಕರೆಯುತ್ತಾರೆ. ನಮ್ಮ ಬೆನ್ನ ಹಿಂದೆ ಕರಿತಾರೆ. ಅವರು ಇಷ್ಟು ದಿನ ಅವರಿಗೆ ಮಾತ್ರ ಗೊತ್ತಿತ್ತು. ಈಗ ನಮಗೂ ತಿಳಿಯಿತು. ಇನ್ನು ಎಷ್ಟು ಜನ ಗೊತ್ತಿದ್ಯೋ ಏನೋ ಗೊತ್ತಿಲ್ಲ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಪಶ್ಚಿಮ ಪೂರ್ವಗಳ ಅಪೂರ್ವ ಸಂಗಮ ಟರ್ಕಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಂವಿಧಾನದ ಪ್ರಕಾರ ಟರ್ಕಿ ಜಾತ್ಯತೀತ ರಾಷ್ಟ್ರವಾಗಿದ್ದರೂ, ಅನುದಿನದ ಬದುಕಿನಲ್ಲಿ ಅದು ಪಾಲನೆಯಾಗುತ್ತಿಲ್ಲ. ಶಾಲೆಗಳಲ್ಲಿ ಧಾರ್ಮಿಕ ವಿಚಾರಗಳನ್ನು ಬೋಧಿಸಲಾಗುತ್ತಿದೆ. ಧರ್ಮವನ್ನು ಮಕ್ಕಳಿಗೆ ಕಲಿಸುವುದಕ್ಕಾಗಿಯೇ ಪಠ್ಯಕ್ರಮವನ್ನು ರೂಪಿಸಲಾಗಿದೆ. ಟರ್ಕಿಯಲ್ಲಿರುವ ಹೆಚ್ಚಿನ ಜನರು ಮುಸ್ಲಿಂ ಧರ್ಮಕ್ಕೆ ನಿಷ್ಠರಾಗಿದ್ದು, ಇಸ್ಲಾಂ ಜಗತ್ತು ಸ್ಥಾಪನೆಯಾಗಬೇಕೆಂಬ ಆಶಯವನ್ನು ಇಟ್ಟುಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ “ಟರ್ಕಿ” ಕುರಿತ ಬರಹ ನಿಮ್ಮ ಓದಿಗೆ

Read More

ಸುಮಾವೀಣಾ ಹೊಸ ಸರಣಿ “ಮಾತು-ಕ್ಯಾತೆ” ಆರಂಭ

ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದ್ದರೂ ಅದನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗುವುದಿಲ್ಲ. ಕಾರಣ ಶಬ್ದಗಳ ಕೊರತೆ. ಮನಸ್ಸಿನಲ್ಲಿ ಭಾವನೆಗಳಿರುತ್ತವೆ….! ಇನ್ನೇನೋ ವಿಶೇಷವಾಗಿರುವುದನ್ನು ಹೇಳಬೇಕು…! ನಾನೂ ಮಾತನಾಡಬೇಕು….! ಎಂದಾಗ ಆ ಭಾವನೆಗಳಿಗೆ ಆತ ಶಬ್ದರೂಪವನ್ನು ಕೊಡಲು ಸಾಧ್ಯವಾಗುವುದಿಲ್ಲ.
ಪದ ಪ್ರಯೋಗಗಳ ಕುರಿತು ಸುಮಾವೀಣಾ ಬರೆಯುವ ಹೊಸ ಸರಣಿ “ಮಾತು-ಕ್ಯಾತೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ