Advertisement

Month: January 2025

ದಿನಗೂಲಿ ನೌಕರರ ಮಹಾತ್ಮ: ರಂಜಾನ್ ದರ್ಗಾ ಸರಣಿ

‘ನ್ಯಾಯನಿಷ್ಠುರಿ, ಲೋಕವಿರೋಧಿ, ಶರಣನಾರಿಗೂ ಅಂಜುವವನಲ್ಲʼ ಎಂಬಂಥ ವ್ಯಕ್ತಿತ್ವ ಅವರದು. ಹೀಗೆ ಮಾತನಾಡಿದರೆ ಆಡಳಿತ ವರ್ಗಕ್ಕಾಗಲೀ ರಾಜ್ಯಶಕ್ತಿಗಾಗಲೀ ತಮ್ಮ ಬಗ್ಗೆ ಯಾವ ಭಾವನೆ ಮೂಡಬಹುದು; ಅದರಿಂದ ತಮಗೆ ಯಾವ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವನ್ನು ಅವರು ಎಂದೂ ಹಾಕಿದವರಲ್ಲ. ಮನುಷ್ಯರ ಬಗ್ಗೆ ಇರುವ ಅವರ ಕಾಳಜಿಯೆ ಅಂಥದ್ದು. ಆ ಕಾಲದಲ್ಲಿ ಅವರು ಒಂದು ರೀತಿಯ ಏಕಾಂಗವೀರರಾಗಿದ್ದರು. ಸದಾ ಕ್ರಿಯಾಶೀಲವಾಗಿರುವ ಅವರ ವ್ಯಕ್ತಿತ್ವ ನನ್ನಂಥವರ ಮೇಲೆ ಆಳವಾದ ಪರಿಣಾಮ ಬೀರಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ

ಇಷ್ಟು ಸುಖ ಕೊಡುವ ಸಂಬಂಧ ನನ್ನ ಪಾಲಿಗೆ ಎಂದೆಂದಿಗೂ ಇಲ್ಲವಾಗುವುದು ಎಂಬ ಅರಿವಿನಿಂದ ನಾನು ತೀರಾ ವಿಹ್ವಲಳಾಗುತ್ತಿದ್ದೆ. ಆದರೆ ಅವನು? ಅವನ ಪಾಲಿಗೆ ಇದೇ ಕೊನೆಯಲ್ಲವಲ್ಲ? ಇಷ್ಟಾಗಿ ನನ್ನ ವೈಯಕ್ತಿಕ ನೋವುಗಳನ್ನು ಅವನೊಂದಿಗೆ ಹೇಳಿಕೊಳ್ಳುವುದಾಗಲೀ, ನನ್ನನ್ನೇ ಮದುವೆಯಾಗು ಎಂದು ಅತ್ತು ಕರೆಯುವುದಾಗಲೀ ನನಗೆ ಸಾಧ್ಯವಿರಲಿಲ್ಲ. ನಮ್ಮ ಸಂಬಂಧ ಎಲ್ಲ ಸಾಮಾನ್ಯ ಸಂಬಂಧಗಳಂತಾಗಿ ಬಿಡುವುದೂ ನನಗೆ ಬೇಕಾಗಿರಲಿಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ “ಹೀಗೇ ಒಂದು ಪ್ರೇಮದ ಕಥೆ”

Read More

ಜೇನ್ನೊಣದ ಬಿಲಿಯನ್ ಡಾಲರ್ ಕೊಡುಗೆ: ಡಾ. ವಿನತೆ ಶರ್ಮಾ ಅಂಕಣ

ನಮ್ಮ ಹವ್ಯಾಸಿ ಕೈತೋಟ ಸದಸ್ಯರಲ್ಲಿ ಒಂದು ನಿಯಮವಿದೆ – ತಾವು ಬೆಳೆಯುವ ತರಕಾರಿ ಹಣ್ಣುಗಳಿಗೆ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸುವಂತಿಲ್ಲ. ಹಾಗೇನಾದರೂ ಬಳಸಿದರೆ ಅಂತಹ ಆಹಾರವನ್ನು ಸದಸ್ಯರಲ್ಲಿ ಹಂಚಿಕೊಳ್ಳಬಾರದು. ಈ ನಿಯಮದಿಂದ ಸದಸ್ಯರಲ್ಲಿ ಪ್ರಕೃತಿಯ ಬಗ್ಗೆ ಕಾಳಜಿ ಹೆಚ್ಚುತ್ತದೆ. ತಮ್ಮ ತರಕಾರಿ ಹಣ್ಣು ಗಿಡಗಳನ್ನು ಕ್ರಿಮಿಕೀಟಗಳು ಭಾದಿಸುತ್ತಿವೆ ಎಂದಾದರೆ ಅವನ್ನು ತೊಲಗಿಸಲು ಸದಸ್ಯರು ತಮಗೆ ಗೊತ್ತಿರುವ ನೈಸರ್ಗಿಕ ವಿಧಾನಗಳನ್ನು ಸೂಚಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ

ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್‌ಫೆಲ್ಡ್‌ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕೆ. ಸತ್ಯನಾರಾಯಣ ಪ್ರವಾಸ ಪ್ರಬಂಧಗಳ ಹೊಸ ಸರಣಿ “ನೆದರ್‌ಲ್ಯಾಂಡ್ಸ್ ಬಾಣಂತನ” ಆರಂಭ

ವಿದೇಶಿ ಪ್ರವಾಸದ ಅನುಭವ ಅಂದರೇನು? ನಾವು ಅಲ್ಲಿ ಕಂಡ ಪ್ರಕೃತಿಯ ದೃಶ್ಯಗಳೇ? ಜನಜೀವನದ ರೀತಿಯೇ? ವಿಚಿತ್ರ, ಅಸಂಗತ ಅನುಭವಗಳೇ? ನಮ್ಮ ಒಡನಾಟಕ್ಕೆ ಸಿಗುವ ವಿದೇಶೀಯರ ವರ್ತನೆಯೇ? ಈ ಕುರಿತು ನಾನು ಯೋಚಿಸಿರಲಿಲ್ಲ. ಯೋಚಿಸುವ ಸಂದರ್ಭ ಕೂಡ ಬಂದಿರಲಿಲ್ಲ. ವಿಮಾನದಲ್ಲಿ ಹಾರಾಡುವುದು, ಅಮೆರಿಕ, ಯುರೋಪು ಸುತ್ತುವುದು, ಪ್ರವಾಸದ ಸಮಯದಲ್ಲಿ ಪಡೆದ ಅನುಭವಗಳನ್ನು ಕುರಿತು ಬರೆಯುವುದು, ಮಾತನಾಡುವುದು, ಇಷ್ಟೇ ವಿದೇಶಿ ಪ್ರವಾಸದ ಅನುಭವ ಎಂಬ ತಪ್ಪು ಕಲ್ಪನೆ ನನ್ನಲ್ಲಿತ್ತು.
ಹಿರಿಯ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ ಸರಣಿ “ನೆದರ್‌ಲ್ಯಾಂಡ್ಸ್ ಬಾಣಂತನ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ