Advertisement

Month: January 2025

‘ಕಂಪ್ಯೂಟರ್’ಗೇ ಪಾಠ ಕಲಿಸಿದ ‘ಮೃತ್ಯು!’: ಪೂರ್ಣೇಶ್‌ ಮತ್ತಾವರ ಸರಣಿ

ಇನ್ನೂ ಕಂಪ್ಯೂಟರ್ ಸರ್‌ರ ವರ್ಣನೆಯನ್ನೆಲ್ಲಾ ಕೇಳಿ ಅವರೆಂದೂ ನಗು ಮೊಗದಿಂದ ಪಾಠ ಮಾಡಲೇ ಇಲ್ಲವೆಂದು ತಿಳಿಯಬೇಡಿ. ನಮ್ಮ ಕಂಪ್ಯೂಟರ್ ಸರ್‌ರಂತಹ ಕಂಪ್ಯೂಟರ್ ಸರ್ ಕೂಡ ನಗು ಮೊಗದೊಂದಿಗೆ ಪಾಠ ಹೇಳಿ ಕೊಡುವ ರಸ ಗಳಿಗೆಗಳಿಗೆ ನಾವು ಸಾಕ್ಷೀಭೂತರಾಗಿದ್ದೆವು. ಆದರೆ, ಆ ಅದೃಷ್ಟ ಇದ್ದದ್ದು ಮಾತ್ರ ನಮಗಲ್ಲ. ಬದಲಿಗೆ, ಕೆಲದಿನಗಳ ಮಟ್ಟಿಗೆ ಪಕ್ಕದ ಶೃಂಗೇರಿಯಿಂದ ಬರುತ್ತಿದ್ದ, ನೋಡಲು ಸುರಸುಂದರಿಯಂತಿದ್ದ ಅತಿಥಿ ಶಿಕ್ಷಕಿಯೊಬ್ಬರಿಗೆ ಮಾತ್ರ!
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎರಡನೆಯ ಬರಹ

Read More

ನಮ್ಮೂರಿನ ಕತೆಗಳು: ಸುಮಾ ಸತೀಶ್ ಸರಣಿ

ಅವರ ಮನ್ಯಾಗೆ ಲೆಟ್ರಿನ್ ಇತ್ತು. ಇಲ್ಲಿ ಬಯಲಿಗೆ ಹೋಗೋಕೆ ಸುತ್ರಾಂ ಒಪ್ತಿಲ್ಲ. ಚೊಂಬು ಹಿಡಿಯಾಕಿಲ್ಲ ಅಂದ್ಲು. ಕೊನೀಗೆ ಸಣ್ಣ ಹುಡ್ಗಿ ಅಂತ ನನ್ನ ಅವಳ ಹಿಂದೆ ಚೊಂಬು ಹಿಡ್ಕೊಂಡು ಮೆರವಣಿಗೆ ಕಳಿಸಿದ್ರು. ಥೋ, ನಂಗೋ ಕೋಪ. ಅವಳ ಹಿಂದೆ ಹೋಗಿ, ಚೊಂಬು ಕೊಟ್ಟೆ. ಆ ನೀರು ಸಾಲಲಿಲ್ಲ ಅಂತ ಅಲ್ಲೇ ಕುಂತ್ಲು. ಇನ್ನೊಂದು ಚೊಂಬು ತರಾಣಿ ಅಂತ ಹೊಂಟ್ರೇ, ಚೊಂಬು ಸಾಲಾಕಿಲ್ಲ, ಬಿಂದಿಗೇಲಿ ತತ್ತಾ ಅಂತ‌ ಹಠ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಕುರಿತ ಬರಹ

Read More

ತಿಳಿವಳಿಕೆಯ ಚಳುವಳಿಗಳಿಂದ ಅರಳಿನಿಂತ ಫ್ರಾನ್ಸ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಫ್ರಾನ್ಸ್ ಕಲಾವಲಯದ ಕುರಿತ ವಿವರಣೆಯು ಪ್ಯಾಬ್ಲೋ ಪಿಕಾಸೊ ಅವರ ಪ್ರಸ್ತಾಪವಿಲ್ಲದೆ ಪೂರ್ಣವಾಗಲಾರದು. ಶಿಲ್ಪಕಲೆಯನ್ನು ಪ್ರಧಾನವಾಗಿಸಿಕೊಂಡು ಇತರ ಕಲೆಗಳಲ್ಲಿಯೂ ತೊಡಗಿಸಿಕೊಂಡ ಇವರು ಸ್ಪೇನ್ ಮೂಲದವರು. ಇಪ್ಪತ್ತನೇ ಶತಮಾನದ ಫ್ರಾನ್ಸ್ ಶಿಲ್ಪಕಲೆಯ ಮೊದಲ ಅರ್ಧಭಾಗ ಪಿಕಾಸೊ ಅವರಿಗೆ ಮೀಸಲಾಗಿದೆ. ‘ಮ್ಯಾನ್ ವಿದ್ ಅ ಲ್ಯಾಂಬ್’ ಎನ್ನುವ ಅವರ ಶಿಲ್ಪಕಲಾ ಕೆತ್ತನೆಯಲ್ಲಿ ಮಾನವೀಯತೆ ಅಭಿವ್ಯಕ್ತಗೊಂಡಿದ್ದರೆ, ‘ಡೆತ್ಸ್ ಹೆಡ್’ ಎನ್ನುವ ಕೆತ್ತನೆಯು ಯುದ್ಧದ ಭೀಕರತೆಯನ್ನು ಮನದಟ್ಟು ಮಾಡಿಕೊಡುವಂತಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಸಿಸಿಇ-ಹೊಸ ಮೌಲ್ಯಮಾಪನ ಪದ್ಧತಿ…: ಅನುಸೂಯ ಯತೀಶ್ ಸರಣಿ

ಇನ್ನು ಪರೀಕ್ಷೆ ಮುಗಿಯುವವರೆಗೂ ಪುಸ್ತಕ ಕೆಳಗೆ ಇಡುವಂತಿಲ್ಲ. ಸದಾ ಕಾಲ ಪುಸ್ತಕವನ್ನು ಕೈಯಲ್ಲೇ ಹಿಡಿದಿರಬೇಕು” ಎಂದಿದ್ದೆ. ನನ್ನ ಮಾತಿನ ಸೂಕ್ಷ್ಮಾರ್ಥವನ್ನು ಗ್ರಹಿಸದ ಆ ಮಗು ಕೇವಲ ಪುಸ್ತಕವನ್ನು ಕೈಯಲ್ಲಿ ಹಿಡಿದು ನನ್ನ ಮಾತಿನ ಪರಿಪಾಲನೆ ಮಾಡಿದ್ದನು. ನನಗಾಗ ಅರ್ಥವಾಯಿತು. ಯಾವುದೇ ವಿಷಯವನ್ನು ಮಕ್ಕಳಿಗೆ ಮಾರ್ಮಿಕವಾಗಿ, ಗೂಡಾರ್ಥದಲ್ಲಿ ಅಸ್ವಷ್ಟವಾಗಿ ಹೇಳಬಾರದು ಎಂದು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ

“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ