Advertisement

Month: January 2025

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ಭಾಷೆಯೆಂಬ ಬದುಕು ಮತ್ತು ಬಾಲ್ಯದ ಬಣ್ಣದ ಕನಸುಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ವೇಷ ತೆಗೆಯದೆ ಯುದ್ಧಕ್ಕೆ ಹೊರಡುವ ಉಪಾಧ್ಯಾಯರು, ರಾಮಣ್ಣನ ಮಾತುಕತೆ, ಮಹೇಂದ್ರನ ಚೇಷ್ಟೆ, ಅನಂತ ಪದ್ಮನಾಭರ ನಡುವಿನ ಜಗಳ, ಪಿ ಟಿ ಮಾಸ್ತರ್‌ರ ಗುಪ್ತ ಪ್ರೇಮ, ಮಕ್ಕಳ ಹೋರಾಟದ ಕೆಲವು ಭಾಗಗಳು ಎಲ್ಲವೂ ಇಲ್ಲಿ ಹೈಲೈಟು. ಹಾಗೆಂದು ಚಿತ್ರ ಹಾಸ್ಯಕ್ಕೆ ಸೀಮಿತಗೊಳ್ಳದೆ, ತಾನು ಹೇಳಬೇಕಾದ ಗಂಭೀರ ವಿಚಾರವನ್ನು ಭಾವಪೂರ್ಣವಾಗಿ ಹೇಳುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬದುಕು ಮತ್ತು ಸುಂಟರಗಾಳಿ: ಗುರುಪ್ರಸಾದ ಕುರ್ತಕೋಟಿ ಸರಣಿ

ಅವತ್ತು ಅರುಣ್ ಯಾಕೋ ಯೋಚನೆಯಲ್ಲಿ ಇದ್ದಂತೆ ಕಂಡರು. ಯಾಕೆ ಏನಾಯ್ತು ಅಂತ ಕೇಳಬೇಕು ಅನಿಸಿದರೂ ಸುಮ್ಮನಿದ್ದೆ. ಅಲ್ಲಿಗೆ ಹೋಗಿ ಹಲವು ವರ್ಷಗಳು ಅಲ್ಲಿಯೇ ನೆಲೆಸಿದ ಮೇಲೆ ನಮ್ಮ ಎಷ್ಟೋ ದೇಸಿಗಳೂ ಕೂಡ ಅಮೆರಿಕದವರಂತೆಯೇ ಆಗಿಬಿಟ್ಟಿರುತ್ತಾರೆ. ಹಾಗೆಲ್ಲಾ ಯಾರಿಗೂ ವೈಯುಕ್ತಿಕ ವಿಷಯಗಳನ್ನು ಏನೂ ಕೇಳೋ ಹಾಗಿಲ್ಲ. ಆದರೆ ಅವರು ಹಾಗಿರಲಿಲ್ಲ. ತಾವೇ ತಮ್ಮ ಬೇಜಾರಿನ ಕಾರಣವನ್ನು ಅರುಹಿದರು. ಅವರಿಗೂ ತಮ್ಮ ದುಗುಡಗಳನ್ನು ಹಂಚಿಕೊಳ್ಳಲು ಯಾರಾದರೂ ಬೇಕಿತ್ತು ಅನಿಸಿತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೇಳನೆಯ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ