Advertisement

Month: January 2025

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು ಕೂಡ ಲ್ಯಾಂಡ್‌ ಬ್ಯಾಂಕ್‌ ಕೆಲಸದಲ್ಲಿ ಎಷ್ಟೇ ಹೊತ್ತು ತಡವಾದರೂ ಒಂದು ಸಲ ಸಂಜೆ ಅಂಗಡಿಗೆ ಹೋಗಿ, ಸಾಮಾನು, ಕ್ಯಾಶ್‌ ಎಲ್ಲ ಲೆಕ್ಕ ನೋಡಿ ತಮ್ಮನಿಗೆ ಸಹಾಯ ಮಾಡುತ್ತಿದ್ದ. ನೋಡಿ, ಈಗಿನ ಕಾಲದಲ್ಲೂ ಇಂತಹ ಗುಣವಂತ, ನೀತಿವಂತ ಹುಡುಗರು ಇರುತ್ತಾರಾ ಅಂತ ಕಿರಂಗೂರಿನ ಸಮಸ್ತ ಪ್ರಜೆಗಳಿಗೆ ಕೊನೇ ಪಕ್ಷ ಮೂರು ನಾಲ್ಕು ಸಲವಾದರೂ ಗೋದಾದೇವಿ ಹರಿಕತೆ ಮಾಡಿ ತಿಳಿಸಿದ್ದಳು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ಅಂಪೈರ್‌ ಮೇಡಂ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆತಂಕದಲ್ಲೋ, ಆಸೆಯಲ್ಲೋ ತಮ್ಮ ಹಾಗೆಯೇ ಕಾಣುವ ಭಾರತೀಯರನ್ನು ಸುರೀನಾಮಿಗಳು ಎಂದು ಭಾವಿಸುತ್ತಾರೆ. ಡಚ್ಚರು ಅವರು ಭಾರತೀಯರಲ್ಲ, ಕೇವಲ ಸುರೀನಾಮಿಗಳು ಎಂದು ಪ್ರವಾಸಿ ಭಾರತೀಯರನ್ನು ಎಚ್ಚರಿಸುತ್ತಾರೆ. ಕೆಲವರನ್ನು ಕಂಡಾಗ ಅವರು ಭಾರತೀಯರಾಗಿದ್ದರೆ ಎಂದು ನಮಗೂ ಆಸೆಯಾಗುತ್ತದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹನ್ನೆರಡನೆಯ ಬರಹ

Read More

ಕಾಣದ ಮುಳ್ಳನ್ನು ಕಾಣದ ಮುಳ್ಳಿಂದ…..: ಎಲ್.ಜಿ.ಮೀರಾ ಅಂಕಣ

“ನೀಲಿ… ಈ ನರಕಸಮ ರೋಗ ಯಾರಿಗಿರುತ್ತೋ ಅವರನ್ನು ಹಚ್ಚಿಕೊಂಡವರಿಗೂ ಒಂದು ಭಯಾನಕ ಅಸ್ವಸ್ಥತೆ ಉಂಟಾಗುತ್ತೆ ಕಣೇ. ಅದೇ ಆಗ್ಲೇ ಹೇಳಿದ್ನಲ್ಲಾ ಯಾತನಾಬಂಧ ಅಂತ, ಅದೇ ಕಣೆ ನಂಗೆ ಆಗಿದ್ದು. ಇದು ಹೇಗೆ ಅಂದ್ರೆ ನಾವು ಮಾಡ್ತಿರೋದು ನಮಗೆ ಅಪಾಯಕರ ಅಂತ ಗೊತ್ತಿದ್ರೂ ಮನಸ್ಸು ಅದನ್ನೇ ಮತ್ತೆ ಮತ್ತೆ ಮಾಡುವಂತೆ ನಮ್ಮನ್ನ ಬಲವಂತಿಸುತ್ತೆ!”.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎಂಟನೆಯ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ