ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ