Advertisement

Month: January 2025

ಆಸ್ಟ್ರೇಲಿಯನ್ ಬನ್ನಿಂಗ್ಸ್ ಸಂಸ್ಕೃತಿ: ವಿನತೆ ಶರ್ಮ ಅಂಕಣ

ರಜೆ ಮುಗಿದು ಕೆಲಸಕ್ಕೆ ವಾಪಸ್ಸಾದ ಸಹೋದ್ಯೋಗಿಗಳನ್ನು ‘ರಜೆಯಲ್ಲಿ ಏನೇನು ಮಾಡಿದಿರಿ’ ಎಂದು ಕೇಳುವುದು ಜನವರಿ ತಿಂಗಳ ಮೊದಲವಾರದ ಅತ್ಯಂತ ಮುಖ್ಯವಾದ ಕೆಲಸ. ಇದನ್ನು ಯಾರೂ ಮರೆಯುವಂತಿಲ್ಲ. ಹಾಗೆ ಕೇಳಿ ಅವರು-ನಾವು ಹೇಳುವ, ಹಂಚಿಕೊಳ್ಳುವ ಕಥೆಗಳು ರೋಚಕವೂ, ರಂಜನೀಯವೂ ಆಗಿರುತ್ತದೆ. ಈ ಬಾರಿ ಯಾತಕ್ಕೋ ಕೆಲವರು ರಜೆಯೆಲ್ಲ ಮನೆ ರಿಪೇರಿ ಕೆಲಸದಲ್ಲೇ ಕಳೆಯಿತು ಎಂದು ಉದ್ಗಾರವೆಳೆದರು. ಸ್ವಂತ ಮನೆಯಿದ್ದರೆ ನಾವು ಮಾಡುವ ರಿಪೇರಿ ಕೆಲಸಗಳಿಗೆ ಕೊನೆ-ಮೊದಲಿರುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹತ್ತು ಮಹಡಿಯ ಭರ್ಜರಿ ಪ್ಲಾನು….: ಎಚ್.ಗೋಪಾಲಕೃಷ್ಣ ಸರಣಿ

ಬೆಳಗಿಂದ ಸಂಜೆವರೆಗೂ ನನ್ನ ಸಂಗಡವೆ ಇತ್ತು ಅದು. ಮಧ್ಯಾಹ್ನ ನಿದ್ದೆ ಕೂಡ ಮಾಡದೇ ನನ್ನ ಜತೆಗೆ ಇದ್ದುಬಿಡ್ತು. ಮನೆಗೆ ಹೊರಡ್ತಾ ಮಗೂನ ಮುದ್ದಿಸಿದೆ. “ಮಗು ತುಂಬಾ ಮುದ್ದು, ನನ್ನನ್ನ ತುಂಬಾ ಹಚ್ಚಿಕೊಂಡಿದೆ “ಅಂದೆ. ಬೆಳಿಗ್ಗೆಯಿಂದ ನನ್ನ ಸಂಗಡವೇ ಇತ್ತು. ಪುಟ್ಟ ಕೂಸು, “ಅಂಕಲ್‌ನ ಒಬ್ಬರನ್ನೇ ಬಿಡಬೇಡ, ಸಿಕ್ಕಿದ್ದೆಲ್ಲಾ ಜೇಬಲ್ಲಿ ಹಾಕ್ಕೊಳತ್ತೆ ಅದು, ಅದರ ಹಿಂದೇನೆ ಇರು ಅಂತ ಅಜ್ಜಿ ಹೇಳಿತ್ತು…” ಅಂತ ಸತ್ಯ ಬಯಲು ಮಾಡಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬನ್ನಿ.. ಸ್ವಯಂಪ್ರಭೆಯರನ್ನು ಸಂಭ್ರಮಾಚರಿಸೋಣ: ಎಲ್.ಜಿ.ಮೀರಾ ಅಂಕಣ

ಸಾಂಪ್ರದಾಯಿಕ ಸಮಾಜದ ಊಹೆಗೆ ನಿಲುಕದ ಇನ್ನೊಂದು ಜಿಗಿತವನ್ನು ನಮ್ಮ ಹೆಣ್ಣುಮಕ್ಕಳು ಈಗ ಮಾಡುತ್ತಿದ್ದಾರೆ. ಅದೇನೆಂದರೆ ಲಿಂಗ ಎಂಬುದು ಕೇವಲ ಗಂಡು-ಹೆಣ್ಣು ಎಂದು ಎರಡು ತುದಿಗಳಲ್ಲ, ಗಂಡಿನೊಳಗೆ ಹೆಣ್ಣು ಮತ್ತು ಹೆಣ್ಣಿನೊಳಗೆ ಗಂಡು ಬೇರೆ ಬೇರೆ ಪ್ರಮಾಣಗಳಲ್ಲಿ ಇರಬಹುದು, ಹೀಗಾಗಿ ಲಿಂಗ ಎಂಬುದು ಶ್ರೇಣಿ ಎಂಬ ಹೊಸ ತಿಳುವಳಿಕೆಯನ್ನು ತಮ್ಮ ನಡೆನುಡಿ, ಇರಿಸರಿಕೆ, ಹೋರಾಟಗಳಿಂದ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತನೆಯ ಬರಹ

Read More

ಬೀಳ್ಕೊಡುಗೆ…: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಬೆಂಗಳೂರಿನ ಧ್ಯಾನ ಹೆಚ್ಚುತ್ತಿದ್ದಂತೆ, ಹೊರಡುವ ದಿನ ಸಮೀಪಿಸುತ್ತಿದ್ದಂತೆ ಗೆಳೆಯರ ಜೊತೆ ನೆಂಟರಿಷ್ಟರ ಜೊತೆ ಕಲ್ಪನಾ ಸಂಭಾಷಣೆಗೆ ಪ್ರಾರಂಭವಾಯಿತು. ಒಂದು ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ, ಪರಿಚಿತ ಕಟ್ಟಡ ಸಂಕೀರ್ಣವೊಂದರ ಮುಂದೆ ನಿಂತಿದ್ದೆ. ಒಬ್ಬರು ಕೈ ಗಾಡಿಯಲ್ಲಿ ತಂದು ಟೀ, ಕೇಕ್, ಚಿಪ್ಸ್, ಸಿಗರೇಟ್ ಮಾರುತ್ತಿದ್ದರು. ಥೇಟ್ ನಮ್ಮ ಪೆಟ್ಟಿ ಅಂಗಡಿಯ ರೀತಿ, ದರ್ಶಿನಿ ಕೆಫೆಗಳ ರೀತಿ. ಇಂತಹದೊಂದು ದೃಶ್ಯವನ್ನೇ ನಾನು ಇಷ್ಟು ದಿನ ನೋಡಿರಲಿಲ್ಲ. ಇದು ಟಿಪಿಕಲ್ ಬೆಂಗಳೂರು ದೃಶ್ಯ. ಈ ದೃಶ್ಯವನ್ನು ನೋಡುತ್ತಾ ಸಂತೋಷ ಪಡುತ್ತಲೇ ನಾನು ನೆದರ್‌ಲ್ಯಾಂಡ್ಸ್‌ನಿಂದ ಬೀಳ್ಕೊಡುಗೆ ಪಡೆದು ಹೊರಡಬೇಕೆನ್ನಿಸಿತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹದಿಮೂರನೆಯ ಬರಹ

Read More

ಪೀಪಲ್ಸ್ ರಿಪಬ್ಲಿಕ್ ಚೀನಾದಲ್ಲಿ….: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಸುತ್ತಲೂ ಆಕಾಶದ ಒಳಗೆ ಮೋಡಗಳ ಜೊತೆಗೆ ಸಾಗರದ ಅಲೆಗಳಂತೆ ಕಣ್ಣು ಹಾಯುವವರೆಗೂ ಬೆರೆತುಹೋಗಿರುವ ಅನಂತ ಗಿರಿ ಶಿಖರ ಶ್ರೇಣಿಗಳು. ತಣ್ಣನೆ ರಾತ್ರಿಯಲ್ಲಿ ಚಳಿಯ ರಗ್ಗನ್ನೊದ್ದು ಕಣ್ಣುಜ್ಜಿಕೊಂಡು ಪೂರ್ವದಲ್ಲಿ ಬೆಟ್ಟಗಳ ಕಡೆಗೆ ಸೂರ್ಯನು ನೋಡುತ್ತಿದ್ದನು. ನಡುವೆ ಬಿಳಿ ಮುಗಿಲು ಮತ್ತು ಮಂಜಿನ ತೆರೆಗಳ ಸರಸ. ಎಲ್ಲವನ್ನು ಸೀಳಿಕೊಂಡು ಆಕಾಶವನ್ನೇ ಮೆಟ್ಟಿಲು ಮಾಡಿಕೊಂಡು ಗಿರಿ ಶಿಖರಗಳ ಮೇಲೆ ಎದ್ದು ಬಿದ್ದು ಚಾಚಿ ಮಲಗಿರುವ ಡ್ರ್ಯಾಗನ್ ಮಹಾಗೋಡೆಗಳು.
ಚೀನಾ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ