ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ