Advertisement
ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

ನೆಲದ ಹೆಗಲೂರಿದ ಗುರುತು

ಇಳಿಬಿದ್ದ ಮುಗಿಲು
ಎದಿಯಾಗ ಹೊಕ್ಹಂಗ
ಗುಡಾರದ ಕಾಲುಗಳು ತಲೆಯ ನೇವರಸಿ
ಪಕ್ಕೆಲುಬಲಿ ಸೆಳೆತಗೊಂಡು ಉರುಳಿದಂತೆ

ಈ ಕತ್ತಲ ಸರಳ ಬಂದಿ ಹುಣ್ಣಿಗೆ
ಎಚ್ಚೆರಗೊಂಡ ಕಣ್ಣೆವೆಗಳಲಿ
ಜಾಲಿಗಂಟಿದ ಜೋಳಿಗೆಗೆ
ಕರುಳುಣಿಸಿದ ಬೀದಿ ಬದಲಿಯಾದ ಸುದ್ದಿ!

ಎದೆಯಬ್ಬಿಸಿ ಬೆವರ ಕುಡಿದ ನೆಲ
ಒಡಲಿಗೆ ಕಪ್ಪು ಬಟ್ಟೆ ಬಿಗಿಸಿಕೊಂಡು
ಕಣ್ಣೀರ ಕಡಲುರಿತದ ರೆಪ್ಪೆಗೆ
ಅಹವಾಲು ಹೊರಡಿಸಿದೆ
ಗುರುತಿನ ಸಾಕ್ಷಿಗಾಗಿ

ಬೇರಿನ್ಹಂಗ ಆಳ ಹೊಕ್ಕ ನೆನಪು
ಚಂದ್ರನ್ಹಂಗ ಇರುಳ ಕುಡಿದ ಕನಸು
ಬೀದಿ ಬದಿಯಲಿ ನೆಲೆಯೂರಿವೆ
ಇರುಳ ಹಕ್ಕಿಯಾಗಿ
ಹೆಜ್ಜೆಗೆ ಗೆಜ್ಜೆ ಕಟ್ಟಿ
ಕುಣಿದು ಕುಪ್ಪಳಿಸಿದ ತಮಟೆಗಳು
ಹಾಡಿಗೆ ಕಣ್ಣಾದ ಢಮರುಗದ ಕೋಲ್ಮಿಂಚುಗಳು
ಮೈಯೋಲೆಗಳಾಗಿ ಇಳಿಬಿದ್ದು
ಉಯ್ಯಾಲೆಯಾದ ಬಿಸಿಯುಸಿರು
ಹೊರಳಾಡಿದವು
ನಿತ್ಯ ಚಕ್ರದ ಸುರುಳಿಯಲಿ

ತಲೆಮಾರುಗಳ ಕಾವುಂಡ ನೆಲೆ
ಹಲವು ಬುರುಡೆಗಳ ಜೀವ ಮಿಡಿತಕ್ಕೆ
ಶತಮಾನದ ಕಸೂತಿಯಾಗಿ
ವಂಶವೃಕ್ಷ ಚಿತ್ರಿಸಿ
ಹದವಾದ ಮಣ್ಣೊಳಗೆ
ಬೆಸೆದುಕೊಂಡ ಬೀಜಗಳಾಗಿವೆ

ಸಾಲು ದೀಪದ ನಕ್ಷತ್ರಗಳ್ಹಂಗ
ನೆಲದ ಹೆಗಲೂರಿದ ಪುರಾವೆಗಳು
ವಸಂತದ ಅಕ್ಕರೆಯಲಿ ನಿತ್ಯನೂತನದ ಘೋಷಗಳು

 

ಕಿರಸೂರ ಗಿರಿಯಪ್ಪ ಬಾಗಲಕೋಟ ಜಿಲ್ಲೆಯ, ಕಿರಸೂರ ಮೂಲದವರು.
ಸಧ್ಯ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
‘ನಾಭಿಯ ಚಿಗುರು’  ಇವರ ಪ್ರಕಟಿತ ಕವನ ಸಂಕಲನ.

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ