Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ

ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್‌ನ ಆ ಘಟನೆ, ರೆಡ್ಮಂಡ್‌ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಛಲದ ಮುಂದೆ ನ್ಯೂನತೆಗಳು ನಿಲ್ಲೋಲ್ಲ: ಕಾರ್ತಿಕ್ ಕೃಷ್ಣ ಸರಣಿ

ನನಗೆ ಎಲ್ಲಕ್ಕಿಂತ ಇಷ್ಟವಾದದ್ದು ಲೈಲ್ಸ್‌ನ ಖತರ್ನಾಕ್ ಎಂಟ್ರಿ. ಅವನು ಟ್ರ್ಯಾಕ್‌ಗೆ ಬರುವ ಕಾನ್ಫಿಡೆನ್ಸನ್ನು ನೀವೊಮ್ಮೆ ನೋಡಬೇಕು. ಆ ಕಾಂಫಿಡೆನ್ಸಿನಿಂದಲೇ ಅವನು ಅರ್ಧ ಪಂದ್ಯವನ್ನು ಗೆಲ್ಲುತ್ತಾನೆ ಎಂದು ನನಗನ್ನಿಸುತ್ತದೆ. ಹೆಸರು ಕೂಗಿದೊಡನೆ ವೇಗವಾಗಿ ಓಡಿ ಬಂದು, ಕುದುರೆಯಂತೆ ನೆಗೆದು ಇಡೀ ಪ್ರಪಂಚದ ಗಮನವನ್ನು ತನ್ನತ್ತ ಸೆಳೆಯುವ ಅವನ ಆತ್ಮವಿಶ್ವಾಸ ಎಂತವರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ನೂತನ ಒಲಿಂಪಿಕ್ ಚಾಂಪಿಯನ್ ನೋಅ ಲೈಲ್ಸ್ ನಮ್ಮ ಆತ್ಮವಿಶ್ವಾಸವನ್ನೂ ಒಂದಷ್ಟು ಹೆಚ್ಚಿಸಲಿ ಅಲ್ಲವೇ?
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಗೋ ಮಾಂಡೋ…. ಗೋ…!!: ಕಾರ್ತಿಕ್‌ ಕೃಷ್ಣ ಸರಣಿ

ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್‌ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್‌ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್‌ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್‌ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್‌ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ