Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

“ಆದರೆ… ಅದೆಂತಹ ವಿಪರ್ಯಾಸ
ಘನಿಸುವ ಪ್ರೇಮಭಾವಗಳ ನಡುವೆಯೂ
ಗಡಿಯ ದಾಟಲಾರದೆ ಹೋದ
ಚಾಂಡಲ ಹಕ್ಕಿಯ ಪಡಿಯಚ್ಚು ನಾನು..!
ಬೆನ್ನಿಗಂಟಿಕೊಂಡೇ ಬಂದಿದೆ
ಮೈಯ ಮೇಲಣ ಬಣ್ಣ
ಗಡಿಗಳ ಕೊರೆದು ನಿಲ್ಲಿಸಿದೆ
ಅಸ್ಪೃಶ್ಯನೆಂಬ ಕಾರಣ..!”- ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

Read More

ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

“ನಾವೋ…
ಮಹಾತಾಯ ಗರ್ಭದಲ್ಲಿ
ಎಂದೋ ಉದುರಿ ಬಿದ್ದು
ಅವಳ ನಿರ್ಲಕ್ಷ್ಯಕ್ಕೆ ಒಳಪಟ್ಟ
ಅಸ್ಪೃಶ್ಯ ಮಕ್ಕಳು
ಮುಟ್ಟಲಾರೆವು
ಅವಳ ಮೊಲೆ ಹಾಲನ್ನು
ಎಲ್ಲರಂತೆ ಆಡಲಾಗದ
ಎಲ್ಲರಂತೆ ಕುಣಿಯಲಾಗದ
ಧರೆಯ ಹೆಳವರು
ಭೂತ ವರ್ತಮಾನದ ಹಾದಿ
ಅನಾದಿಗಳನ್ನು ಕಾಣದೆ
ಭವಿಷ್ಯದ ಹೆಜ್ಜೆ ಗುರುತುಗಳನ್ನು
ಮೂಡಿಸಲು
ಅಜ್ಜ ಬಿಟ್ಟು ಹೋದ
ಊರುಗೋಲನ್ನೇ ನಂಬಿ
ಕುಂತಲ್ಲೇ ಕೂತಿದ್ದೇವೆ…!”- ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

Read More

ಪ್ರಶಾಂತ್‌ ಬೆಳತೂರು ಬರೆದ ಈ ದಿನದ ಕವಿತೆ

“ಬದುಕಿದ್ದಷ್ಟು ದಿವಸ
ದುಡಿಮೆಗಾಗಿಯೇ ಹುಟ್ಟಿದ್ದವಳು..!
ಹೋಗುವ ಕೊನೆಯ ಗಳಿಗೆಯಲ್ಲೂ
ರಾಶಿಬಿದ್ದ ಬಟ್ಟೆಗಳನ್ನು
ಸೋಲೊಪ್ಪದ ನಿತ್ರಾಣ ರಟ್ಟೆಗಳಲ್ಲಿ
ಒಗೆದು ಸ್ವಚ್ಛಗೊಳಿಸಿ ಸುಮ್ಮನಾಗದೆ”- ಪ್ರಶಾಂತ್‌ ಬೆಳತೂರು ಬರೆದ ಈ ದಿನದ ಕವಿತೆ

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ಮಾನವೀಯ ಮೌಲ್ಯಗಳ ಪ್ರಯೋಗಶೀಲ ಕಾವ್ಯ: ಪ್ರಶಾಂತ್ ಬೆಳತೂರು

ಕತ್ತಲ ಸಾಮ್ರಾಜ್ಯದಲ್ಲಿ ಹುಟ್ಟಿನ ಜಾಡು ಹಿಡಿದು ಕತೆ ಹೇಳುವ ಮೆಟ್ಟಿನ ಕತೆ ಬರೀ ಕತೆಯಾಗದೆ ಕಾವ್ಯವಾಗುವ ಪರಿಯೇ ಒಂದು ವೈಶಿಷ್ಟ್ಯಪೂರ್ಣ. ತನ್ನ ಕತ್ತಲ ಸಾಮ್ರಾಜ್ಯದ ಕತೆಯನ್ನು ದೇಶಕ್ಕೆ, ಪ್ರಪಂಚಕ್ಕೆ, ಇಡೀ ಭೂಮಂಡಲಕ್ಕೆ ವಿಸ್ತರಿಸಿ ಹೇಳುತ್ತೇನೆನ್ನುವ ಅದರ ತುಡಿತ ಎಲ್ಲರನ್ನೂ ಒಳಗೊಳ್ಳುವ ಸಾಂಸ್ಕೃತಿಕ ಪ್ರಕ್ರಿಯೆಯೂ ಆಗಿದೆ. ಈ ನಿಟ್ಟಿನಲ್ಲಿ ಕವಿಗೆ ತನ್ನ ಕಾವ್ಯದ ಉದ್ದೇಶಗಳ ಕುರಿತು ಸ್ಪಷ್ಟತೆ ಇದೆ. ಈ ದಿಶೆಯಲ್ಲಿ ಇದೊಂದು ಅಪಾರವಾದ ಮಾನವೀಯ ಮೌಲ್ಯಗಳ ತಾಯ್ತನ ತುಡಿತದ ಪ್ರಯೋಗಶೀಲ ಕಾವ್ಯ ಅನ್ನಬಹುದು. ಈ ಅಂಶ ಕಾವ್ಯದ ಉದ್ದಕ್ಕೂ ಓದುಗನನ್ನು ಮನಮುಟ್ಟುತ್ತದೆ.
ಎಂ. ಜವರಾಜ್‌ ಕಥನ ಕಾವ್ಯ “ಮೆಟ್ಟು ಹೇಳಿದ ಕಥಾ ಪ್ರಸಂಗ”ದ ಕುರಿತು ಪ್ರಶಾಂತ್‌ ಬೆಳತೂರು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ