Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಭೂಮ್ತಾಯಿ ಮ್ಯಾಗ್ಳ ಗಿಡ ಗಂಟಿ ಬುಟ್ರೆ ದಿಷ್ಟಿ ನಿವಾಳ್ಸೋದೇ ದೊಡ್ಡ ಮದ್ದು: ಸುಮಾ ಸತೀಶ್ ಸರಣಿ

ನಾವು ಉಣ್ಣಾವಾಗ ಒಂದು ಕಡಿಕ್ಕೆ ಕುಂತು ಉಂಡು, ಗೋಮೆ ಇಕ್ಕಿ ಎದ್ದೇಳ್ ಬೇಕು. ಅದ್ ಬುಟ್ಟಿ ಓಡಾಡೋ ಜಾಗದಾಗೆ ಉಂಡ್ರೆ, ತಟ್ಟೆಗ್ಳಾಗಿಂದ ಮುಸ್ರೆ ಪಸ್ರೆ ಚೆಲ್ಲಾಕಿಲ್ವೇ? ಅದುನ್ನ ಯಾರಾನಾ ತುಳುದ್ರೆ ಕಾಲ ರಂಜು ಆಗ್ತೈತೆ ಅಂತಿದ್ರು. ಭೂಮ್ತಾಯಿ ಕೊಡಾ ಅನ್ನವಾ ಅಂಗೆ ಮರ್ವಾದೆ ಇಲ್ದಂಗೆ ಚೆಲ್ಲೀರೆ, ಅದ್ನ ತುಳ್ದು ಪಳ್ದು ಮಾಡೀರೆ ನಮ್ಗೆ ಒಳ್ಳೇದಾಯ್ತೈತೆ? ಅಂಬೋರು. ಇದೂ ಒಂತರಾ ದಿಟವೇಯಾ. ಕಿಲೀನ್ ಆಗಿರ್ಬೇಕು ಅಂಬ್ತ ಪಾಠ ಹೇಳ್ತೈತೆ. ಭೂಮ್ತಾಯಿ ಕೊಡಾ ಪ್ರಸಾದ್ವ ಚೆಲ್ಬಾರ್ದು ಅಂತ್ಲೂ ಹೇಳ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಮದ್ದುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಹುಚ್ಚಾಟಗ್ಳು: ಸುಮಾ ಸತೀಶ್ ಸರಣಿ

ಸ್ಯಾನೆ ಟೇಮಿದ್ರೆ ಉಂಗುರ ಸೆಂದಾಗಿ ಮಾಡ್ತಿದ್ವಿ. ವೈನಾಗಿ ಜಡೆ ಹೆಣ್ದು ಅದುನ್ನ ಬೆಳ್ಳಿನ್ ಗಾತ್ರುಕ್ಕೆ ಸರ್ಯಾಗಿ ಬಗ್ಗಿಸಿ, ಸುತ್ತಿ‌ ಬಾಲ ಇಲ್ದಂಗೆ ಮಾಡೀವಿ. ಆತ್ರ ಇದ್ರೆ ತಿಥಿ ಮಾಡ್ಸಾ ಐನೋರು ದರ್ಬೇನಾಗೆ (ಒಣಗಿದ್ ಹುಲ್ಲು) ಸುಮ್ಕೆ ಒಂದು ಗಂಟು ಆಕಿ, ಬೆಟ್ಟಷ್ಟು ಉದ್ದೂಕೆ ನಿಟಾರ್ ಅಂತ ನಿಂತಿರಾ ಹುಲ್ಲು ಕೊಟ್ಟು ಉಂಗ್ರ ಆಕ್ಕಳಿ ಅಂಬಲ್ವೇ ಅಂಗೇ ನಾವೂ ಸುಮ್ಕೆ ಒಂದು ಗಂಟು ಹಾಕಿ, ಉದ್ದೂಕೆ ಗರಿ ಅಂಗೇ ಬುಟ್ಟು, ಕೈಯಾಗೆ ಏರ್ಸಿ ಓಡ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಪೆಟ್ಟಿಗೆ ಅಂಗ್ಡೀಲಿ ಪೈಸಾ ಲೆಕ್ಕ: ಸುಮಾ ಸತೀಶ್ ಸರಣಿ

ಮಾರೋನು ವಾರಕ್ಕೊಂದು ದಪ ಇಸ್ಕೂಲ್ ತಾವ ಬತ್ತಿದ್ದ. ಅದು ಎಲ್ಡು ತರ ಇರ್ತಿತ್ತು. ಒಂದು ಈಗ್ಲೂ ಸಿಗ್ತೈತೆ. ಅದೇ ಮೊಳಕೈ ಉದ್ದುದ್ದು ಕಡ್ಡೀಗೆ ರೋಜಾ(ಗುಲಾಬಿ) ಬಣ್ಣುದ್ದು ಹತ್ತಿ ತರ ಸುತ್ತಿರ್ತಾರಲ್ಲ. ಕೈಗೂ ಬಾಯ್ಗೂ ಅಂಟ್ರುಸ್ತೈತಲ್ಲ ಅದು. ಇನ್ನೊಂದು ರಬ್ಬ್ರು(ರಬ್ಬರ್) ತರ ನಾರಿನಂಗೆ ಇರ್ತಿತ್ತು. ಎಳುದ್ರೆ ಸಾಗ್ತಾನೆ(ಹಿಗ್ಗುವ) ಇರಾ ದಾರ. ಅದುನ್ನ ಕೈಗೆ ವಾಚೋ, ಇಮಾನವೋ, ಸೈಕಲ್ಲೋ, ಕಾರೋ ಮಾಡಿ ಹಾಕೋನು. ಬೇಸಾಗಿ ಮಾಡ್ತಿದ್ದ. ಕಾಸು ಕಮ್ಮಿ ಇದ್ರೆ ಬೆಟ್ಟಿಗೆ ಉಂಗುರ ಮಾತ್ರ ಸಿಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಾಲ್ಗೆ ಚಪ್ಲ ತೀರಿಸ್ತಿದ್ದ ತಿಂಡಿಗ್ಳು: ಸುಮಾ ಸತೀಶ್ ಸರಣಿ

ಹಬ್ದಾಗೆ ಒಬ್ಬಟ್ಟು‌ ಮಾಡ್ದಾಗೆಲ್ಲಾ‌ ಒಬ್ಬಟ್ಟಿನ್ ಸಾರೂ ಮಾಡ್ತಿದ್ರು. ಒಬ್ಬಟ್ ಎಂಗೆ ಪಿರೂತೀನೋ ಆ ಸಾರೂ ಆಟೇಯಾ. ಒಬ್ಬಟ್ಟು ಸೀಗಿರ್ತಿತ್ತಲ್ಲ, ಅದುಕ್ಕೆ ನಮ್ಮನ್ಯಾಗೆ ಎಲ್ರೂವೇ ಸಾರು ಹಾಕ್ಕಂಡು ತಿನ್ನಾರು.‌ ನಂಗೇ ಮಾತ್ರ ಅದು‌ ಹಿಡುಸ್ತಿರ್ಲಿಲ್ಲ. ನಾನು ಹಾಲೂ ತುಪ್ಪ ಹಾಕ್ಕಂಡೇ ತಿಂಬ್ತಿದ್ದೆ.‌‌
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಆಗಿನ ಕಾಲದ ತಿಂಡಿಗಳ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ