Advertisement

Tag: ಆತ್ಮಕತೆ

ಧರ್ಮ ತೊಡಕು ಮತ್ತು ಬೆಳಕು: ರಂಜಾನ್ ದರ್ಗಾ ಸರಣಿ

ಸಮಾಜದಲ್ಲಿ ವಿಚಾರವಾದದ ಬೆಳವಣಿಗೆಯಿಂದ ಮಾತ್ರವೇ ನವಸಮಾಜದ ನಿರ್ಮಾಣವಾಗಲು ಸಾಧ್ಯ. ಎಲ್ಲ ಧರ್ಮಗಳನ್ನು ವಿಚಾರವಾದದ ಒರೆಗಲ್ಲಿಗೆ ಹಚ್ಚದಿದ್ದರೆ ಮಾನವಕುಲ ಇನ್ನೂ ಅಧೋಗತಿಗೆ ಹೋಗುವುದು. ಧರ್ಮಗಳ ತಿರಸ್ಕಾರದಿಂದ ವಿಚಾರವಾದಿಗಳು ಇದನ್ನು ಸಾಧಿಸಲಿಕ್ಕಾಗದು. ಧರ್ಮಗಳಲ್ಲಿನ ಅರಿವಿನ ಬೆಳಕಿನೊಂದಿಗೆ ಮಾತ್ರ ಈ ವಿಚಾರಹೀನ ಸ್ಥಿತಿಯಿಂದ ಹೊರಬರಲು ಸಾಧ್ಯ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 94ನೇ ಕಂತು ನಿಮ್ಮ ಓದಿಗೆ

Read More

ಅಳಿಸಲಾಗದ ನೋವುಗಳು: ಅಶೋಕ ಪವಾರರ ಆತ್ಮಕತೆಯ ಪುಟಗಳು

ಅಪ್ಪ, ಧೋಂಡಿ ಮಾಮಾ ಮತ್ತು ಲಮಾಣಿಗಳು ಪೋಲೀಸರ ಕಾಲಿಗೆ ಬಿದ್ದರು. ‘‘ಸರಕಾರ„„ ಧಣ್ಯಾರ, ನಾವು ಕಳ್ಳತನ ಮಾಡಿಲ್ಲರಿ. ಬೇಕಾದರ ಯಾವ ದ್ಯಾವರ ಮುಂದೂ ಕರ್ಕೊಂಡ ಹೋಗರಿ. ನಮ್ಗ ಏನೂ ಗೊತ್ತಿಲ್ಲರಿ.’’ ಸಾಯೇಬ ಸೊಂಟದ ಬೆಲ್ಟ ಬಿಚ್ಚಿದ. ಧೋಂಡು ಮಾಮಾನ ಮುಕಳಿಗೆ ಎರಡು ಜಡಿದ. ಲಮಾಣ್ಯಾರ ಮುಕುಳಿ ಮ್ಯಾಲೂ ಒದ್ದರು. ಅವರು ಜೋರ-ಜೋರಾಗಿ ಬೊಬ್ಬಿ ಹೊಡೀತ ಕಾಲಿಗೆ ಬಿದ್ದರು. ಮುಂದ ಅಪ್ಪನ ಬೆನ್ನಿಗೂ ಜೋರಾಗಿ ಗುದ್ದಿದರು. ಅಪ್ಪ ತಲಿಗೆ ಚಕ್ಕರ ಬಂದ ಬಿದ್ದ.
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಅಶೋಕ ಪವಾರರ ಆತ್ಮಕತೆ “ಬಿಡಾರ”

Read More

“ತಾಳೆಗರಿ” ಮತ್ತು ಆರದ ಗಾಯಗಳು…

ಯಾವ ಆಸೆಯಿಂದ ಅವರು ನನ್ ಆಗಿದ್ದರೋ ಅದು ಈಡೇರುವ ಯಾವ ಸೂಚನೆಯೂ ಅವರಿಗೆ ಕಾಣುವುದಿಲ್ಲ. ಒಂದು ಸಾರಿ ಕೀಳು ಜಾತಿಯಲ್ಲಿ ಹುಟ್ಟಿದ್ರೆ ಅವರು ಸಾಯೋವರೆಗೂ ಅಲ್ಲೇ ಇರಬೇಕು. ಅದರ ನೋವು ಅವಮಾನ ಅನುಭವಿಸಲೇಬೇಕು. ನಮ್ಮವರು ನಿದ್ದೆಯಿಂದ ಎದ್ದು ಬರಬೇಕಾಗಿದೆ. ಈ ಗುಲಾಮಗಿರಿಯನ್ನು ಸಹಿಸಿಕೊಳ್ಳಬಾರದು, ಬದಲಾವಣೆಗಾಗಿ ನಾವೇ ಎದ್ದು ನಿಲ್ಲಬೇಕಾಗಿದೆ, ಜಾತಿ ಹೆಸರಿನಿಂದ ತಲೆಮಾರಿನಿಂದ ನಮ್ಮನ್ನು ತುಳಿಯುತ್ತಲೇ ಬಂದವರ ವಿರುದ್ಧ ಧ್ವನಿ ಎತ್ತುವ ಕೆಲಸ ಭಾಮಾ ಅವರು ಮಾಡುತ್ತಾರೆ.
ಡಾ. ಎಚ್‌.ಎಸ್.‌ ಅನುಪಮಾ ಅನುವಾದಿಸಿದ ತಮಿಳಿನ ಬಾಮಾ ಅವರ ಆತ್ಮಕತೆ “ಬಾಮಾ ತಾಳೆಗರಿ”ಯ ಕುರಿತು ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಬರಹ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ