Advertisement

Tag: ಕನ್ನಡ ಸಾಹಿತ್ಯ

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ

ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ