Advertisement

Tag: ಕಾದಂಬರಿ

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ