Advertisement

Tag: ಕಾರ್ತಿಕ್‌ ಕೃಷ್ಣ

ಭಾವನೆಗಳಿಗೆ ಬೆಲೆ ಕಡಿಮೆಯಾಗುತ್ತಿರುವ ಹೊತ್ತು…: ಕಾರ್ತಿಕ್ ಕೃಷ್ಣ ಬರಹ

ಇಂತಹದೇ ಆಯ್ಕೆ ವಾಟ್ಸ್ಯಾಪ್‌ಗೆ ಬರಲು ಬಹಳ ಸಮಯವೇನೂ ಬೇಕಾಗಿಲ್ಲ ಎಂದು ಕಳೆದ ವಾರವಷ್ಟೇ ಮನೆಯಲ್ಲಿ ಚರ್ಚೆ ನಡೆದಿತ್ತು. ಅರೇ.. ಇಷ್ಟು ಬೇಗ ಆ ಆಯ್ಕೆ ಬಂದೇ ಬಿಟ್ಟಿತಲ್ಲ ಅಂದುಕೊಂಡು ರಿಪ್ಲೈ ಮಾಡುವ ಬದಲು ಲೈಕ್ ಒತ್ತಿ ‘ಆಲ್ರೈಟ್… ಮುಂದಕ್ಕೆ ಹೋಗೋಣ’ ಎಂದು ಮತ್ತೊಂದು ಸ್ಟೇಟಸ್ ನೋಡತೊಡಗಿದೆ. ನನ್ನದೊಂದು ರಿಪ್ಲೈನಿಂದ ಶುರುವಾಗಬಹುದಾಗಿದ್ದ ಸಂಭವನೀಯ ಸಂಭಾಷಣೆಯೊಂದು ಚಿಗುರೊಡೆಯುವ ಮುನ್ನವೇ ಕನಲಿ ನರಳಿದ್ದು ನನಗೆ ಆ ಕ್ಷಣ ಗೊತ್ತಾಗಲಿಲ್ಲ!
ಕಾರ್ತಿಕ್‌ ಕೃಷ್ಣ ಬರಹ ನಿಮ್ಮ ಓದಿಗೆ

Read More

ಆರೋಗ್ಯಕ್ಕೆ ಒಂಬತ್ತೇ ಮೆಟ್ಟಿಲು… ಕಾರ್ತಿಕ್ ಕೃಷ್ಣ ಬರಹ

ಮುಂದಿನ ಬಾರಿ ನೀವು ಮೆಟ್ರೋ ನಿಲ್ದಾಣಕ್ಕೆ ಹೋದಾಗ, ಎಸ್ಕಲೇಟರ್ ಹಾಗೂ ಮೆಟ್ಟಿಲುಗಳ ಮೇಲೆ ಓಡಾಡುವ ತಲೆಗಳನ್ನು ಲೆಕ್ಕ ಹಾಕಲು ಟ್ರೈ ಮಾಡಿ. ಮೆಟ್ಟಿಲನ್ನು ಬಳಸುವ ಜನರ ಲೆಕ್ಕ ನಿಮಗೆ ಆರಾಮಾಗಿ ಸಿಕ್ಕಿಬಿಡುತ್ತದೆ. ಎಸ್ಕಲೇಟರ್ ಮೇಲಿನ ಮಾನವರ ತಲೆಗಳನ್ನು ಎಣಿಸುವುದು ಮಾತ್ರ ತಾರೆಗಳನ್ನು ಕಲೆಹಾಕಿದಷ್ಟೇ ಕಷ್ಟವಾಗಬಹುದು. ಇದಕ್ಕೆ ಕಲಶಪ್ರಾಯವಾಗಿ, ಮೊಬೈಲ್ ಫೋನು ನೋಡುತ್ತಾ, ಮೆಟ್ಟಿಲುಗಳ ಬಳಿ ಬಂದು, ಕೂಡಲೇ ಮುಖವನ್ನು ಸಿಂಡರಿಸಿಕೊಂಡು, ಪಕ್ಕದ ಎಸ್ಕಲೇಟರ್ ಏರಿದ ಹೋಮೋ ಸೇಪಿಯನನ್ನು ಕೆ ಆರ್ ಪುರ ಮೆಟ್ರೋ ನಿಲ್ದಾಣದಲ್ಲಿ ನೋಡಲು ಸಿಕ್ಕಿದ್ದು ನನ್ನ ಸುಕೃತವೋ…
ಮೆಟ್ಟಿಲುಗಳ ಬಳಕೆಯ ಕುರಿತು ಕಾರ್ತಿಕ್‌ ಕೃಷ್ಣ ಬರಹ ನಿಮ್ಮ ಓದಿಗೆ

Read More

ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ

ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್‌ಫೆಲ್ಡ್‌ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಇಲ್ಲಿ ಸೋಲೂ ಇದೆ, ಗೆಲುವೂ ಇದೆ…: ಕಾರ್ತಿಕ್ ಕೃಷ್ಣ ಸರಣಿ

ಅಂಕಗಳು ಸೋರಿಹೋಗುತ್ತಿದ್ದರೂ ಎದೆಗುಂದದೆ ಆಡುತ್ತಿದ್ದ ಮೆರಿನ್ ಕೆಲವೇ ಘಳಿಗೆಯಲ್ಲಿ ನೋವನ್ನು ತಾಳಲಾರದೆ ಮತ್ತೆ ಕುಸಿದಳು. ಈ ಬಾರಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅವಳ ನೋವಿಗೆ ಇಡೀ ಕ್ರೀಡಾಂಗಣ ಮರುಗುತ್ತಿತ್ತು. ಕುಸಿದಲ್ಲೇ ಅಳುತ್ತಿದ್ದ ಮೆರಿನ್‌ಳನ್ನು ತಬ್ಬಿ ಸಮಾಧಾನ ಮಾಡುತ್ತಿದ್ದ ಅವಳ ಕೋಚ್‌ಗೂ ಕೂಡ ತನ್ನ ಕಣ್ಣೀರನ್ನು ತಡೆಹಿಡಿಯಲಾಗಿರಲಿಲ್ಲ. ಎದುರಾಳಿ ಹೇ ಗೆ ತಾನು ಫೈನಲ್ ತಲುಪಿದ್ದಕ್ಕೆ ಖುಷಿಪಡುವುದೋ, ಅಥವಾ ಮೆರಿನ್‌ಳ ಸ್ಥಿತಿಯನ್ನು ನೋಡಿ ಮರುಗುವುದೋ, ಒಂದೂ ತಿಳಿಯದೆ ಮೆರೀನಳ ಬಳಿ ಬಂದು ವಿಷಾದದ ನೋಟ ಬೀರುತ್ತಾ ನಿಂತಿದ್ದಳು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ

ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್‌ನ ಆ ಘಟನೆ, ರೆಡ್ಮಂಡ್‌ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ