Advertisement

Tag: ಗಾಂಧೀಜಿ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ ಪತ್ರವಿದೆಯಲ್ಲ ಅದು ಒಬ್ಬ ಆದರ್ಶ ತಂದೆ ತನ್ನ ಮಗಳ ಕುರಿತ ಅಪರಿಮಿತ ಅಪ್ಯಾಯತೆ ಮತ್ತು ಕಾಳಜಿಯಿಂದ ಮಾಡಿದ ಕೆಲಸವೆಂದೇ ನನ್ನ ದೃಢಭಾವನೆ. ಈ ಪತ್ರಗಳು ಒಮ್ಮೊಮ್ಮೆ ಖಂಡಕಾವ್ಯದಂತೆಯೂ ಭಾಸವಾಗಿದ್ದು ನನಗೆ ಆಶ್ಚರ್ಯ ಹುಟ್ಟಿಸಿದೆ.
ಎಂಕೆ ಗಾಂಧಿ ರಚಿತ “ಪ್ರಿಯ ಮೀರಾ” ಬಾಪು ಮಗಳಿಗೆ ಬರೆದ ಪ್ರೇಮ ಪತ್ರಗಳನ್ನು ಮಂಜುನಾಥ್‌ ಚಾಂದ್‌ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ದೀಪಾ ಗೋನಾಳ ಬರಹ

Read More

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

Read More

ಪದಗಳಿಗೆ ಸಿಗದ ಫಕೀರ

ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್‌ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ