Advertisement

Tag: ನಾಟಕ

ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್.‌ ರಮೇಶ್‌ ಬರಹ

Read More

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

Read More

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ