Advertisement

Tag: ಮಾರುತಿ ಗೋಪಿಕುಂಟೆ

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಗಂಟಲೊಳಗಿನ ನಾಣ್ಯ ಮತ್ತು ಆಸೆಯ ಕಣ್ಣು

ಹಟ್ಟಿಯ ಅಂಗಳಕ್ಕೆ ಬಂದವನೆ ಸಡನ್ನಾಗಿ ನಿಂತುಕೊಂಡೆ. ಅಪ್ಪ ಎದುರಿಗೆ ನಿಂತಿದ್ದಾನೆ. ಭೀಮನ ಗದೆಯಂತ ಕೋಲು ಹಿಡಿದು ತೇಪೆಯ ಅಂಗಿಯ ತೊಟ್ಟು.. ಸಿಟ್ಟಿಗೆ ಮುಖ ನಡುಗುತ್ತಿದೆ… ಕೈಯಲ್ಲಿನ ಕೋಲು ಕುಣಿಯುತ್ತಿದೆ. ನನಗೆ ಎಲ್ಲವೂ ಅರ್ಥವಾಗಿತ್ತು. ಅಪ್ಪನಿಗೆ ನಾನು ಹಣ ತೆಗೆದುಕೊಂಡಿದ್ದು ಗೊತ್ತಾಗಿದೆ. ಪಕ್ಕದಲ್ಲಿ ಅಕ್ಕ ನಿಂತಿದ್ದಳು. ಅವಳ ಮುಖದಲ್ಲಿ ನಗು ನೋಡಿ ಅರ್ಥವಾಯಿತು. ಓ.. ನಾನು ಬೆಳಿಗ್ಗೆ ತೆಗೆದುಕೊಳ್ಳುವಾಗ ಇವಳು ನೋಡಿರಬೇಕು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಶಾಲಾ ಕಲಿಕೆಯ ಆರಂಭದ ದಿನಗಳು…..

ಎದುರು ಮನೆಯಾದ್ದರಿಂದ ಗೃಹ ಕೆಲಸಗಳನ್ನು ಮಾಡುವಾಗ ಬರುತ್ತಿದ್ದರು. ಪ್ರತಿದಿನವು ಪಕ್ಕದಲ್ಲೆ ಕೂರಿಸಿಕೊಂಡು ಅಕ್ಷರಾಭ್ಯಾಸ ಮಾಡಿಸಿದರು. ನಾನು ಹಠಕ್ಕೆ ಬಿದ್ದವನಂತೆ ಕಲಿತೆ. ಅದೊಂದು ತಪಸ್ಸು ಎನ್ನುವಂತೆ ಕಲಿತುಕೊಂಡೆ. ಅಲ್ಲಿಂದ ನನ್ನಲ್ಲಿ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿತು. ಓದುವುದನ್ನು ಬಹಳ ಬೇಗನೆ ಕಲಿತಿದ್ದೆ. ಅಷ್ಟರಲ್ಲಾಗಲೇ ಒಂದನೆ ತರಗತಿಯ ಪುಸ್ತಕದ ಆರು ಪಾಠಗಳು ಮುಗಿದು ಹೋಗಿದ್ದವು. ಏಳನೆಯ ಪಾಠವೆ ‘ಚರಕ’ ಗಾಂಧೀಜಿಯವರ ಆದರ್ಶದ ಪ್ರತಿಬಿಂಬದಂತಿದ್ದ ನಮ್ಮ ಉಡುಪುಗಳನ್ನು ನಾವೆ ತಯಾರಿಸಿಕೊಳ್ಳಬೇಕು ಎನ್ನುವ ಸೂಚಕವಾಗಿ ನೂಲು ನೇಯುತಿದ್ದ ಚರಕದ ಮುಂದೆ ಕುಳಿತಿದ್ದ ಚಿತ್ರ ನಮ್ಮನ್ನು ಆಕರ್ಷಿಸಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ