ನೀಲಿ ಬರೆಗಳ ಮುಟ್ಟಿ ಮುಟ್ಟಿ ನೋಡಿದ
ಅಂತೂ ಚಿಕ್ಕಪ್ಪ ಬಂದಿದ್ದ. ಯಾವತ್ತಿನಂತೆ ಎದ್ದು ನಿಂತು ಕೈ ಮುಗಿದೆ. ಬೀಗ ತೆಗೆದು; ‘ಐದು ನಿಮಿಷ ಇರಿ; ಪಲಾವ್ ತರ್ತೀನಿ’ ಎಂದು ಸೈಕಲೇರಿ ಹೋದ. ಪಲಾವ್ ಎನ್ನುವ ಹೆಸರನ್ನೆ ನಾನಾಗ ಕೇಳಿರಲಿಲ್ಲ. ಕೈಕಾಲು ಮುಖ ತೊಳೆದು ದೇವರಿಗೆ ಕಡ್ಡಿ ಹಚ್ಚು ಎಂದ ತಾತ. ಹಾಗೇ ಮಾಡಿದೆ. ಪಲಾವ್ ತಂದ ಚಿಕ್ಕಪ್ಪ. ಗಮ್ಮೆನ್ನುವ ಪೊಟ್ಟಣ. ತಾತನ ಮೆಲ್ಲಗೆ ‘ಇದೇನಪ್ಪಾ’ ಎಂದು ಕೇಳಿದ. ‘ಗಮುಲ್ದನ್ನ’ ಎಂದ. ಅಹಾ! ಅಂತಹ ಗಮಗಮಿಸುವ ಅನ್ನವ ನಾನೆಂದೂ ಉಂಡಿರಲಿಲ್ಲ. ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಹದಿನೈದನೆಯ ಕಂತು
Read More