Advertisement

Tag: ರಂಜಾನ್ ದರ್ಗಾ

ನಾವು ಎತ್ತ ಸಾಗಿದ್ದೇವೆ?

ಈ ಜಾತ್ರೆಯಲ್ಲಿ ಬಡಿಗೆಗಳನ್ನು ಕೊಳ್ಳುವುದೊಂದು ವಿಶೇಷ. ಹಿಡಿಯಲು ಅನುಕೂಲವಾಗುವಷ್ಟು ದಪ್ಪನೆಯ ಬೆತ್ತದ ಬಡಿಗೆಗಳಿಗೆ ಕೇರಿನ ರಸದಿಂದ ಡಿಸೈನ್ ಮಾಡಿ ಸಿಂಗರಿಸುತ್ತಿದ್ದರು. ಈ ಜಾತ್ರೆಯಲ್ಲಿ ಮನೆಗೆ ಮತ್ತು ಒಕ್ಕಲುತನಕ್ಕೆ ಬೇಕಾದ ಎಲ್ಲ ವಸ್ತುಗಳು ಕೂಡ ಸಿಗುತ್ತಿದ್ದವು. ಎತ್ತುಗಳ ಆಲಂಕಾರಿಕ ವಸ್ತುಗಳು ರೈತರ ಮನಸೂರೆಗೊಳ್ಳುತ್ತಿದ್ದವು. ತಮ್ಮ ದನಕರುಗಳನ್ನು ಸಿಂಗರಿಸುವುದೆಂದರೆ ರೈತರಿಗೆ ಎಲ್ಲಿಲ್ಲದ ಖುಷಿ. ಅವರು ಆ ಪರಿಯಿಂದ ಕಾಳಜಿ ವಹಿಸಿ ತಮ್ಮ ಮಕ್ಕಳ ಸಿಂಗಾರ ಮಾಡಿದ್ದನ್ನು ನಾನು ಹಳ್ಳಿಯಲ್ಲಿ ನೋಡಲಿಲ್ಲ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಅವರ ಬದುಕು ಅರ್ಥವಾಗದೆ ನಮ್ಮ ಬದುಕು ವ್ಯರ್ಥ

ನನ್ನ ತಂದೆಯ ಕಡೆಯಿಂದ ಹಣ ಪಡೆದು ಏನೋ ತರಲು ನನ್ನ ತಾಯಿ ತಿಳಿಸುತ್ತಿದ್ದಳು. ನಾನು ಮರೆಗುಳಿಯಾಗಿದ್ದರಿಂದ ಅಂಗಿಯ ಕೆಳಗೆ ಗಂಟು ಹಾಕಿ ಕಳಿಸುತ್ತಿದ್ದಳು. ಶ್ರೀ ಸಿದ್ಧೇಶ್ವರ ರಸ್ತೆಯ ಮರಗಳ ಸಾಲಿನ ನೆರಳಲ್ಲಿ ನನ್ನ ತಂದೆಯ ಬಳಿ ಹೋಗುವ ಮೊದಲೆ ಅಂಗಿಯ ಗಂಟು ಹಾಕಿದ ವಿಚಾರವೇ ಮರೆತುಹೋಗುತ್ತಿತ್ತು! ಹೀಗೇಕೆ ಗಂಟು ಹಾಕಿಕೊಂಡಿರುವೆ ಎಂದು ನನಗೆ ನಾನೇ ಬೇಸರಪಟ್ಟುಕೊಂಡು ಅದನ್ನು ಬಿಚ್ಚುತ್ತಿದ್ದೆ. ನನ್ನ ತಂದೆ ಕೆಲಸ ಮಾಡುವ ಅಡತಿ ಅಂಗಡಿಗೆ ಹೋದಾಗ ಸೇಂಗಾ ಕೊಡಿಸಲು ಹೇಳುತ್ತಿದ್ದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಗೋಳಗುಮ್ಮಟದ ಸುತ್ತಮುತ್ತ

ಸೇಂಗಾ, ಹುರಿಗಡಲೆ, ಮಸಾಲೆವಠಾಣಿ, ಪೆಪ್ಪರಮೆಂಟ್ ಮುಂತಾದವುಗಳನ್ನು ಮಾರುವ ಮಧ್ಯ ವಯಸ್ಕನೊಬ್ಬ ಆ ಚಿಕ್ಕ ಕಟ್ಟಡದಲ್ಲಿ ಆರಂಭದಲ್ಲೇ, ನೆಲದ ಮೇಲೆ ಹಾಸಿಕೊಂಡು ಕುಳಿತಿರುತ್ತಿದ್ದ. ಆ ಬಡ ವ್ಯಕ್ತಿಯ ಬದುಕು ಆನಂದಮಯವಾಗಿತ್ತು. ಸದಾ ಹಸನ್ಮುಖಿಯಾಗಿ ಇರುತ್ತಿದ್ದ. ಖಾಕಿ ಹಾಫ್ ಪ್ಯಾಂಟ್ ಮತ್ತು ಹಾಪ್ ಷರ್ಟ್ ಆತನ ‘ಯೂನಿಫಾರ್ಮ್’ ಆಗಿತ್ತು. ಆ ಪುಟ್ಟ ವ್ಯಾಪಾರದಲ್ಲಿ ಎಷ್ಟು ಗಳಿಸುತ್ತಿದ್ದನೋ ದೇವರೇ ಬಲ್ಲ. ಆದರೆ ಆತನ ಜೀವನ್ಮುಖಿ ಬದುಕು ಆದರ್ಶಪ್ರಾಯವಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ