Advertisement

Tag: ರಂಜಾನ್ ದರ್ಗಾ

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ದೇಸಾಯ್ತಿಯ ಸೀರೆ

ಆಡಳಿತ ನಿರ್ವಹಣೆಯಲ್ಲಿ ತೊಡಗಿದ್ದ ಪುರುಷರು ಮನಸ್ಸು ಇಲ್ಲದ ಮಾರ್ಗದಂತೆ ದೇಸಾಯ್ತಿಯ ಕಾರ್ಯ ನಿರ್ವಹಿಸತೊಡಗಿದರು. 25 ಗ್ರಾಮಗಳ ಕಂದಾಯ ವಸೂಲಿ ಮಾಡುವಲ್ಲಿ ಸಮಸ್ಯೆಯಾಯಿತು. ಈ ಗ್ರಾಮಗಳಲ್ಲಿನ ದೇಶಗತಿಯ ವತನಿ ಭೂಮಿಯೆ 16 ಸಾವಿರ ಎಕರೆಗಳಷ್ಟಿತ್ತು! ಉತ್ತರಾಧಿಕಾರದ ಬಯಕೆಯಿಂದಾಗಿ ದಾಯಾದಿಗಳು ಕೂಡ ಅತೃಪ್ತರಾಗಿದ್ದರು. ಆದರೆ ಕಾಶೀಬಾಯಿ ಎದೆಗುಂದದೆ ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತದಲ್ಲಿ ಯಶಸ್ಸು ಸಾಧಿಸಿದರು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಮೂವತ್ತನೆಯ ಕಂತು

Read More

ವಚನದ ಹಾದಿಗೆ ಸೆಳೆದ ಫ.ಗು. ಹಳಕಟ್ಟಿಯವರು…

ಈ ನೆನಪು ಏಕೆ ಉಳಿದಿದೆ ಎಂದರೆ, ಜನ ಈ ಬಡ ವಯೋವೃದ್ಧರ ಕಾಲಿಗೆ ಏಕೆ ಬೀಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಬ್ಯಾಂಕಿಗೆ ಭೇಟಿ ಕೊಡಬೇಕಾದ ಪ್ರಸಂಗವಿದ್ದಾಗ ಹಳಕಟ್ಟಿಯವರು ಆ ಬೃಹತ್ ದೇವಾಲಯದ ಮುಂದೆ ನಿಧಾನವಾಗಿ ಹಾಯ್ದು ಬ್ಯಾಂಕ್ ಕಚೇರಿಗೆ ಹೋಗುವ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮತ್ತು ಪುರುಷರು ಅವರ ಕಾಲುಮುಟ್ಟಿ ನಮಸ್ಕಾರ ಮಾಡುತ್ತಿದ್ದರು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೊಂಭತ್ತನೆಯ ಕಂತು

Read More

ಬದುಕಿಗೆ ಸಾವಿರ ತಿರುವುಗಳು

ಹೊಸದಾಗಿ ಬಂದ ಕೃಷ್ಣಾ ಜಾಣನೂ ಮೃದು ಸ್ವಭಾವದವನೂ ಆಗಿದ್ದ. ಹೆಣ್ಣು ಧ್ವನಿಯ ಆತ ‘ಬ್ಯೂಟಿಫುಲ್’ ಆಗಿದ್ದ. ಆತ ಬಂದ ಹೊಸದರಲ್ಲಿ ಜಗ್ಗು ಒಂದು ಸಲ ಕೃಷ್ಣಾಗೆ ಮತ್ತು ನನಗೆ ಐಸ್ಕ್ರೀಮ್ ತಿನ್ನಲು ಪಾರ್ಲರ್‌ಗೆ ಕರೆದುಕೊಂಡು ಹೋದ. ವಿಜಾಪುರದಲ್ಲಿ ಇದ್ದುದರಲ್ಲೇ ಅದು ಬಹಳ ಪಾಶ್ ಆಗಿತ್ತು. ಒಳಗೆ ಕ್ಯಾಬಿನ್‌ಗಳಿದ್ದವು. ಒಂದು ಕ್ಯಾಬಿನ್‌ನಲ್ಲಿ ಹೋಗಿ ಕುಳಿತೆವು. ನನಗೆ ಅಂಥ ಅನುಭವ ಮೊದಲನೆಯದಾಗಿತ್ತು. ಒಂದು ಪೆಗ್ ತುಂಬ ಐಸ್ಕ್ರೀಮ್ ಕೂಡ ಮೊದಲ ಬಾರಿಗೆ ತಿಂದದ್ದು. ಕೃಷ್ಣಾ ಬಹಳ ಮುಜುಗರದಿಂದ ತಿನ್ನುತ್ತಿದ್ದ.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೆಂಟನೆಯ ಕಂತು

Read More

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ