Advertisement

Tag: ರಂಜಾನ್ ದರ್ಗಾ

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ

ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಪತ್ರಿಕಾ ರಂಗದ ನಾಡೋಜ ಪಾಟೀಲ ಪುಟ್ಟಪ್ಪ: ರಂಜಾನ್‌ ದರ್ಗಾ ಸರಣಿ

ಬಡವರ ಬಗ್ಗೆ, ಹದಗೆಟ್ಟ ರಾಜಕೀಯ ಸ್ಥಿತಿಯ ಬಗ್ಗೆ ಮತ್ತು ಸಾಮಾಜಿಕ ನಿಷ್ಕ್ರಿಯತೆಯ ಬಗ್ಗೆ ಪಾಪು ಮರಗುತ್ತಿದ್ದರು. ಸಾಹಿತ್ಯ, ರಾಜಕಾರಣ, ಸಿನಿಮಾರಂಗ ಮುಂತಾದ ಕ್ಷೇತ್ರಗಳಲ್ಲಿನ ದೊಡ್ಡವರ ಸಣ್ಣತನದ ಬಗ್ಗೆ ಮತ್ತು ಸಣ್ಣವರ ದೊಡ್ಡತನದ ಬಗ್ಗೆ ವಿವರಿಸುತ್ತಿದ್ದರು. ಅವರ ಮಾತುಗಳು ರಂಜಕತೆಯಿಂದ ಮತ್ತು ಕೆಲವು ಸಲ ವಿಷಾದದಿಂದ ಕೂಡಿರುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 83ನೇ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ಮಾತೆ: ರಂಜಾನ್‌ ದರ್ಗಾ ಸರಣಿ

ಮಾತಾಜಿಯವರು ಸ್ಪಷ್ಟವಾದ ಧ್ವನಿಯಲ್ಲಿ ಹೇಳುತ್ತಿದ್ದರು. ಆಗ ಅವರು ಮಾತನಾಡುತ್ತಿದ್ದುದು ಮಹಿಳಾ ಜಗದ್ಗುರುಗಳ ವಿಚಾರವಾಗಿತ್ತು. ಅವರು ಹೇಳುವ ಶೈಲಿ ವೀರೋಚಿತವಾಗಿತ್ತು. ಯೌವನದ ಉತ್ಸಾಹದಿಂದ ಕೂಡಿದ ಸಾತ್ವಿಕ ಸೌಂದರ್ಯ ಮತ್ತು ಅಧ್ಯಾತ್ಮದ ಮೆರಗು ಮೇಳೈಸಿದ ಅವರ ಮಾತು, ಮಹಿಳೆಯ ಅಸ್ಮಿತೆಯ ಬಗೆಗಿನ ದೃಢನಿರ್ಧಾರದ ಧ್ವನಿಯಾಗಿತ್ತು. ಅವರ ಮಾತಿನಿಂದ ಸಭೆಯಲ್ಲಿ ವಿದ್ಯುತ್ ಸಂಚಾರವಾದಂತಾಯಿತು. ಮಹಿಳೆ ಜಗದ್ಗುರುವಾಗುವುದೆಂದರೇನು? ಅದು ಹೇಗೆ ಸಾಧ್ಯ?
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 82ನೇ ಕಂತು ನಿಮ್ಮ ಓದಿಗೆ

Read More

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ