Advertisement

Tag: ಸಣ್ಣಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ