Advertisement

Tag: ಸಾಹಿತ್ಯ

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಗೌತಮ ಜ್ಯೋತ್ಸ್ನಾ ಬರೆದ ಈ ಭಾನುವಾರದ ಕತೆ

ವತ್ಸನ ಹೊಟ್ಟೆಯೊಳಗೆ ಏನೋ ಚುಚ್ಚಿದ ಹಾಗೆ ನೋವು, ಇಡೀ ಶರೀರ ಬಿಗಿಯಾಗುತ್ತಿದ್ದ ಭಾವ. ಆ ಬಾರಿನ ದೀಪದ ಬುರುಡೆಗಳು ಈಗ ದಟ್ಟ ಹಳದಿ ಪ್ರಭೆಯಲ್ಲಿ ಧಗಧಗಿಸುತ್ತಿದ್ದವು, ಯಾವುದೋ ಅನ್ಯ ಗ್ರಹದಲ್ಲಿ ಗ್ರಹಣವಾದಾಗ ಮಬ್ಬಾಗಿ ಬೆಳಕಾದಂತೆ.
ಗೌತಮ ಜ್ಯೋತ್ಸ್ನಾ ಹೊಸ ಕಥಾ ಸಂಕಲನ “ಜಕ್ಕಿಣಿ” ಬಿಡುಗಡೆಯಾಗುತ್ತಿದ್ದು, ಈ ಸಂಕಲನದ ಒಂದು ಕತೆ “ಮಾರೀಚ
ಅಥವಾ ಒಂದು ಅಪಾಯಕಾರಿ ಮನಸ್ಸಿನ ಪ್ರಣಯ ಪ್ರಸಂಗ” ನಿಮ್ಮ ಓದಿಗೆ

Read More

ಮತ್ತೆ ಸಿಗುವ ಆಶಯದ ಪಯಣ: ಚಂದ್ರಮತಿ ಸೋಂದಾ ಸರಣಿ

ಮನೆಯ ಜನರೆಲ್ಲರಿಗೂ ʻಹೋಗಿ ಬರ್ತೇನೆʼ ಎನ್ನುತ್ತ ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ಹೇಳುವುದು, ಅಲ್ಲಿಂದ ನಡುಮನೆಯಲ್ಲಿ ಕೆಲಹೊತ್ತು ಮಾತನಾಡುತ್ತ ನಿಲ್ಲುವುದು, ಅಲ್ಲಿಂದ ಜಗಲಿಗೆ, ಅನಂತರ ಹೆಬ್ಬಾಗಿಲಲ್ಲಿ ತುಸುಹೊತ್ತು ಮಾತನಾಡುತ್ತ ನಿಂತರೆ, ಹೊರಡಲು ಮುಂದಾದವರು ʻಇನ್ನೂ ಮಾತು ಮುಗಿದಿಲ್ವಾ?ʼ ಎಂದು ಕೇಳುತ್ತಲೇ ʻಬಂದೆʼ ಎಂದು ಬಾಯಲ್ಲಿ ಹೇಳಿದರೂ ಅಂಗಳದ ತುದಿಯಲ್ಲಿ ಒಂದು ಗಳಿಗೆಯ ಮಾತುಕತೆ. ಹೀಗೆ ಸಾಗುವ ವಿದಾಯದ ಕ್ಷಣ ನೆನಪಿಡುವಂಥದು. ಕೆಲವೊಮ್ಮೆ ಮನೆಗೆ ಬಂದ ಅಣ್ಣ-ತಮ್ಮಂದಿರು, ಅಥವಾ ಅಕ್ಕ-ತಂಗಿಯರನ್ನು ಕಳುಹಿಸಲು ಊರಬಾಗಿಲತನಕ ಹೋಗುವುದಿದೆ. ಎಲ್ಲರ ಎದುರಿನಲ್ಲಿ ಹಂಚಿಕೊಳ್ಳಲು ಆಗದ ಅದೆಷ್ಟೋ ಸಂಗತಿಗಳು ಅಲ್ಲಿ ವಿನಿಮಯಗೊಳ್ಳುತ್ತಿದ್ದವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಕೊನೆಯ ಕಂತು

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ

ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ