Advertisement

Tag: ಸಾಹಿತ್ಯ

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ