Advertisement

Tag: ಸುಧಾ ಆಡುಕಳ

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಆ ಹೊಳೆವ ಕಂಗಳು…: ಸುಧಾ ಆಡುಕಳ ಅಂಕಣ

ಅದೇನು ಜಾದೂ ನಡೆಯಿತೋ ತಿಳಿಯದು, ಅಲ್ಲಿಂದ ತಿರುಗಿ ಬಂದ ಮಂಜಿಯ ಅಪ್ಪ ಗಡುಸಾಗಿ ಮಾತನಾಡತೊಡಗಿದ, “ಮಗಳು ನಂದು, ಏನು ಮಾಡಬೇಕಂತ ನಂಗೊತ್ತದೆ. ನೀವು ಇನ್ನೂ ಮೀಸೆ ಸರಿಯಾಗಿ ಬರದಿರೋರೆಲ್ಲ ಕಾನೂನು ಮಾತಾಡೂದು ಬ್ಯಾಡ. ಅವಳ ದೇಹ ಬಿಡುಗಡೆಗೆ ಕಾಯ್ತದೆ. ನಮ್ಮ ಕುಟುಂಬದ ದೆಯ್ಯಗಳು ಅವಳನ್ನು ಕಳಿಸಿಕೊಡು ಅಂತ ಕೂಗ್ತಿವೆ. ನೀವು ಪೋಲೀಸು, ಕಾನೂನು ಅಂತ ವರಾತ ಸುರುಮಾಡಿ ಅವಳ ದೇಹ ಕೊಳೆಯೂ ಹಾಗೆ ಮಾಡಬೇಡಿ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ನೀಲಿ ಜಗತ್ತು: ಸುಧಾ ಆಡುಕಳ ಅಂಕಣ

“ಇಕಾ, ನೀನು ಇದನ್ನೊಂದು ಸಲ ಓದು. ಬರೀ ನಿನ್ನ ಶಾಲೆ ಪುಸ್ತಕ ಓದಿ ಹಾಳಾಗಬೇಡ. ಇದನ್ನು ಓದಿದ್ರೆ ನಿಂಗೂ ಮಾನ, ಮರ್ಯಾದೆ ಎಲ್ಲ ಮರೆತುಹೋಗ್ತದೆ.” ಎನ್ನುತ್ತಾ ಹೆಣ್ಣು ಗಂಡುಗಳೆರಡು ವಿಚಿತ್ರ ಭಂಗಿಯಲ್ಲಿರುವ ಪುಸ್ತಕವನ್ನು ಅವಳೆಡೆಗೆ ಹಿಡಿದ. ಅದನ್ನು ನೋಡಿದ್ದೇ ನೀಲಿಯ ಎದೆಯಲ್ಲಿ ನಡುಕ ಪ್ರಾರಂಭವಾಗಿ ಇದ್ದೆನೋ ಬಿದ್ದೆನೋ ಎಂದು ಮನೆಯೆಡೆಗೆ ಓಡತೊಡಗಿದಳು. ಆನಂದನ ಅಮ್ಮನಿಗೆ ಇವೆಲ್ಲವನ್ನೂ ಹೇಳಬೇಕೆಂದು ಎಷ್ಟೋ ಸಲ ಅಂದುಕೊಂಡಳಾದರೂ ಮಗನನ್ನು ದನಕ್ಕೆ ಬಡಿಯುವಂತೆ ಬಡಿಯುವ ಅವಳು ಇಂಥ ಸುದ್ದಿ ಕೇಳಿದರೆ ಅವನನ್ನು ಕೊಂದೇಬಿಟ್ಟಾಳೆಂದು ಸುಮ್ಮನಾದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಲಕ್ಕೀ ನಂಬರ್ 55: ಸುಧಾ ಆಡುಕಳ ಅಂಕಣ

ಓಸಿಯೆಂಬುದು ಹೊಳೆಸಾಲಿನ ದಿನದ ಮಾತುಕತೆಯ ಭಾಗವಾಗಿಹೋಯಿತು. ಪಡ್ಡೆ ಹುಡುಗರು ಹಣ ಕಟ್ಟುವುದನ್ನು ನೋಡಿ ಕೆಲವು ವಯಸ್ಸಾದ ಗಂಡಸರು ರೂಪಾಯಿ, ಎರಡು ರೂಪಾಯಿಗಳನ್ನು ತಮ್ಮ ಹೆಂಡತಿಯರ ಕಣ್ತಪ್ಪಿಸಿ ಕಟ್ಟತೊಡಗಿದರು. ಆದರೆ ನಿಧಾನವಾಗಿ ಅವರಿಗೆಲ್ಲ ತಮ್ಮ ಹೆಂಗಸರೂ ಕೂಡ ಕವಳದ ಸಂಚಿಯಲ್ಲಿ ಬಚ್ಚಿಟ್ಟ ನಾಲ್ಕಾಣೆ, ಎಂಟಾಣೆಯನ್ನು ತಮಗೆ ಗೊತ್ತಿಲ್ಲದೇ ಕಟ್ಟುತ್ತಿರುವ ಸತ್ಯ ತಿಳಿಯಿತು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ