Advertisement

Tag: ಸುಧಾ ಆಡುಕಳ

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಮಗಳು ಇಂದಿರಾಗೆ ನೆಹರೂ ಬರೆದ ಮೂರು ಪತ್ರಗಳು

ನಗರಗಳು ಬೆಳೆಯುತ್ತಾ ಹೋದಂತೆ, ಪಟ್ಟಣಗಳು ಮತ್ತು ದೇಶಗಳು ರೂಪುಗೊಳ್ಳತೊಡಗಿದವು. ಒಂದೇ ದೇಶದಲ್ಲಿ ಹತ್ತಿರ ವಾಸಿಸುವ ಜನರು ಪರಸ್ಪರರನ್ನು ಹೆಚ್ಚು ಹೆಚ್ಚು ಅರ್ಥಮಾಡಿಕೊಳ್ಳತೊಡಗಿದರು. ಅವರು ತಮ್ಮಿಂದ ದೂರದಲ್ಲಿ ಬೇರೆ ದೇಶಗಳಲ್ಲಿ ವಾಸಿಸುವ ಜನರಿಗಿಂತ ತಾವೇ ಶ್ರೇಷ್ಟರು ಎಂದು ಯೋಚಿಸತೊಡಗಿದರು. ಜವಾಹರಲಾಲ್‌ ನೆಹರೂ ತಮ್ಮ ಮಗಳು ಇಂದಿರಾಗಾಂಧಿಗೆ ಬರೆದಿದ್ದ ಪತ್ರಗಳನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸಿದ್ದು, ಮಕ್ಕಳ ದಿನಾಚರಣೆಯ ಈ ದಿನ ಅವುಗಳಲ್ಲಿನ ಮೂರು ಪತ್ರಗಳು ನಿಮ್ಮ ಓದಿಗೆ ಇಲ್ಲಿವೆ…

Read More

ಅನುಭವ ಬುತ್ತಿಯನ್ನು ಅಕ್ಷರವಾಗಿಸಿದ ಲೇಖಕಿ ಅರ್ನಾಕ್ಸ್‌

ಅರ್ನಾಕ್ಸ್ ಬೆಳೆದಿದ್ದು ಫ್ರಾನ್ಸಿನ ನಾರ್ಮಂಡಿ ಪ್ರಾಂತ್ಯದ ಯ್ವೆಟೊಟ್ ಎಂಬ ಪುಟ್ಟ ನಗರದಲ್ಲಿ. ಅವರ ತಂದೆ ಅಲ್ಲಿ ಒಂದು ಕಿರಾಣಿ ಅಂಗಡಿ ಮತ್ತು ಕೆಫೆಯನ್ನು ನಡೆಸುತ್ತಿದ್ದರು. ಅಲ್ಲಿಯ ಶಾಲೆಯಲ್ಲಿ ಕಲಿಯುತ್ತಿರುವಾಗಲೇ ಅವರಿಗೆ ಬಡತನವು ತಂದಿಡಬಹುದಾದ ಸಾಮಾಜಿಕ ತಾರತಮ್ಯದ ಅರಿವಾಯಿತು. ತಮ್ಮ ಬರವಣಿಗೆಯ ಐವತ್ತು ವರ್ಷಗಳಲ್ಲಿ ಅವರು ಬರೆದ ಕೃತಿಗಳ ಸಂಖ್ಯೆ ಇಪ್ಪತ್ತಕ್ಕಿಂತಲೂ ಹೆಚ್ಚು. ಹೆಚ್ಚಿನವು ಕಾದಂಬರಿಗಳಾದರೆ ಇನ್ನು ಕೆಲವು ನಾಟಕಗಳು, ಚಿತ್ರಕಥೆಗಳು. 2022ರ ನೊಬೆಲ್ ಪಾರಿತೋಷಕ ಫ್ರಾನ್ಸಿನ ಲೇಖಕಿ ಆನ್ ಅರ್ನಾಕ್ಸ್ ಕುರಿತು ಸುಧಾ ಆಡುಕಳ ಬರಹ

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಅಕ್ಷರಗಳು ಅನಾವರಣಗೊಳಿಸುವ ಸತ್ಯ

ಸಮಾಜದ ಶ್ರೇಣಿಯಲ್ಲಿ ಮೇಲಿನ ಸ್ಥರದಲ್ಲಿ ನಿಂತ ನಮಗೆ ಕೆಳಗೆ ಕಣ್ಣುಹಾಯಿಸಿದಾಗ ಕಂಡುದಷ್ಟೇ ಸತ್ಯ ಎಂಬ ನಮ್ಮ ಭ್ರಮೆಯನ್ನು ಇಲ್ಲಿನ ಪ್ರತಿಯೊಂದು ಸಾಲುಗಳೂ ‘ಚಿತ್’ ಮಾಡುತ್ತಲೇ ಹೋಗುತ್ತವೆ. ನಮ್ಮ ಭ್ರಮಾಲೋಕ ಕಳಚಿದೊಡನೆ ‘ವಾಸ್ತವದ ಕಹಿಸತ್ಯ’ವನ್ನು ಒಂದಿನಿತೂ ಉತ್ಪ್ರೇಕ್ಷೆಯಿಲ್ಲದೆ ನಮ್ಮೆದುರು ತೆರೆದಿಡುತ್ತದೆ. ‘ಇದು ಸತ್ಯ, ಇದು ವಾಸ್ತವ. ನೀನು ಗ್ರಹಿಸಬೇಕಾದುದು ಹೀಗೆ. ಈ ಗ್ರಹಿಕೆಯೊಂದೇ ಸಮಾನತೆಯೆಡೆಗೆ ನಿನ್ನನ್ನೂ, ನನ್ನನ್ನೂ ಕರೆದೊಯ್ಯಬಲ್ಲುದು. ಸಾಧ್ಯವೇನು ನಿನಗೆ?’ ಎಂಬಂತೆ ತಣ್ಣಗೆ ಪ್ರಶ್ನಿಸುತ್ತವೆ.
ದೇವನೂರ ಮಹಾದೇವ ಬರೆದ “ಎದೆಗೆ ಬಿದ್ದ ಅಕ್ಷರ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ