Advertisement

Tag: ಸುಮಾವೀಣಾ

ಸುಮಾವೀಣಾ ಹೊಸ ಸರಣಿ “ಮಾತು-ಕ್ಯಾತೆ” ಆರಂಭ

ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದ್ದರೂ ಅದನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗುವುದಿಲ್ಲ. ಕಾರಣ ಶಬ್ದಗಳ ಕೊರತೆ. ಮನಸ್ಸಿನಲ್ಲಿ ಭಾವನೆಗಳಿರುತ್ತವೆ….! ಇನ್ನೇನೋ ವಿಶೇಷವಾಗಿರುವುದನ್ನು ಹೇಳಬೇಕು…! ನಾನೂ ಮಾತನಾಡಬೇಕು….! ಎಂದಾಗ ಆ ಭಾವನೆಗಳಿಗೆ ಆತ ಶಬ್ದರೂಪವನ್ನು ಕೊಡಲು ಸಾಧ್ಯವಾಗುವುದಿಲ್ಲ.
ಪದ ಪ್ರಯೋಗಗಳ ಕುರಿತು ಸುಮಾವೀಣಾ ಬರೆಯುವ ಹೊಸ ಸರಣಿ “ಮಾತು-ಕ್ಯಾತೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ

ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಅಂತೂ ಶೆಟ್ಟಿ ಬೇಕರಿಗೆ ಹೋಗಿ ಕಾಲು ಕೆ.ಜಿ. ಲಡ್ಡುವನ್ನು 17.50 ಪೈಸೆ ಕೊಟ್ಟು ತೆಗೆದುಕೊಂಡು ಹೋಗಿ ಸೀತವ್ವಗೆ ಕೊಟ್ಟೆ. ಸ್ವೀಟ್ ತೆಗೆದುಕೊಂಡ ನಂತರ “ಎಷ್ಟುನೆ ಹಣ ಬಂದಿದು ನಿಂಗೆ….” ಅಂದರೆ “25” ಎಂದೆ “ಅಷ್ಟೆಯಾ…..?” ಎಂದು ಜೋರಾಗಿ ನಕ್ಕರು. ಪಾಪ ಅವರಿಗೆ ಇವೆಲ್ಲಾ ಹೇಗ್ ತಿಳಿಯಬೇಕು…?
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಮಡಿಕೇರಿ ಮೇಲ್ ಮಂಜು: ಸುಮಾವೀಣಾ ಸರಣಿ

ಮಳೆಗಾಲದಲ್ಲಿ ದಟ್ಟ ಮಂಜು ಆವರಿಸಿಬಿಟ್ಟರೆ ಐದಾರು ಮೀಟರುಗಳು ಸ್ಪಷ್ಟವಾಗಿ ಕಂಡರೆ ಹೆಚ್ಚು. ಉಳಿದಂತೆ ಮಂಜನ್ನೆ ಸೀಳಿಕೊಂಡು ಹೋಗಬೇಕಾಗಿರುತ್ತಿತ್ತು ಆಗ ಒಂಥರಾ ಥ್ರಿಲ್ ಆಗಿರುತ್ತಿತ್ತು. ವಾಹನ ಅಪಘಾತಗಳು ಸಂಭವಿಸುತ್ತಿದ್ದವು. ಮಳೆ ಜೋರಾಗಿ ಬಂದರೆ ಮಂಜು ಎಲ್ಲಿ ಹೋಗುತ್ತಿತ್ತೋ? ಬಹುಶಃ ಮಳೆಯ ರಭಸಕ್ಕೆ ಎಲ್ಲಿಯಾದರೂ ಅಡಗುತ್ತಿತ್ತೋ ತಿಳಿಯದು ರಣ ಮಳೆ ಚಚ್ಚಿ ಹೋದನಂತೆ ಯಾವುದೋ ಬಿಲದಿಂದ ಮೆಲ್ಲನೆ ಆಚೆ ಬಂದು ತಾಯಿ ಮಗುವನ್ನು ತಬ್ಬುವಂತೆ ಇಡೀ ಮಡಿಕೇರಿ ನಗರವನ್ನು ತಬ್ಬಿಬಿಡುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ