ನದಿಯಂತೆ ಹರಿದವಳು: ಆತ್ಮಕತೆಯ ಒಂದೆರಡು ಪುಟಗಳು
ಶರಾವತಿ ನದಿಗೆ ಅಣೆಕಟ್ಟು ಕಟ್ಟುತ್ತಾರಂತೆ, ನಮ್ಮೂರು ಮುಳುಗುತ್ತದಂತೆ, ನಾಡಿಗೇ ಬೆಳಕು ದೊರೆಯಲಿದೆಯಂತೆ ಎಂಬೆಲ್ಲ ಸುದ್ದಿಗಳನ್ನು ಕೇಳುವಾಗ, ಮೀನಾಕ್ಷಿಯವರಿಗಿನ್ನೂ ಸಣ್ಣ ಹರೆಯ. ಈ ಎಲ್ಲ ಹೇಳಿಕೆಗಳ ನಡುವೆ ಒಂದಕ್ಕೊಂದು ಸಂಬಂಧವಿಲ್ಲ ಎಂದೆನಿಸುತ್ತಿತ್ತು. ಆದರೆ ಹುಟ್ಟಿದೂರು ತೊರೆಯಲೇಬೇಕಾಯಿತು. ಮುಂದಕ್ಕೆ ಎಷ್ಟೊಂದು ಊರುಗಳಲ್ಲಿ, ಕಷ್ಟಗಳ ಮೆಟ್ಟಿಲೇರಿ ಬದುಕನ್ನು ಕಟ್ಟಿಕೊಳ್ಳಬೇಕಾಯಿತು ಎಂಬುದೇ ‘ಹರಿವ ನದಿ’ಯಲ್ಲಿರುವ ಜೀವನಗಾಥೆ. ಅಮ್ಮ ಮೀನಾಕ್ಷಿ ಭಟ್ಟರ ಜೀವನದಲ್ಲಿ ಎದುರಾದ ಸವಾಲುಗಳು ಮಗಳು ಭಾರತಿ ಹೆಗಡೆಗೆ ಇಂದಿಗೂ ಸ್ಫೂರ್ತಿ. ಲೇಖಕಿಯೂ ಆಗಿರುವ ಅವರು ಅಮ್ಮನ ದನಿಗೆ ಅಕ್ಷರ ರೂಪ ನೀಡಿದ್ದಾರೆ. ಈ ಆತ್ಮಕತೆಯ ಒಂದು ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ ಇಲ್ಲಿದೆ.
Read More