Advertisement

Tag: Column

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ