ಕೃಷಿಯ ಖುಷಿ ಬಲ್ಲವರೇ ಬಲ್ಲರು…
ಬೆಂಗಳೂರಿನಲ್ಲಿ ಇನ್ನೂ ಕೆಲಸದಲ್ಲಿದ್ದ ಅವರಿಗೆ ಕೃಷಿಯ ಹುಚ್ಚು. ಅವರಿಗೆ ಮನೆಯಲ್ಲಿ ಹೊಲ ಇದ್ದರೂ ಕೂಡ ಮಾಡಲಾಗದ ಪರಿಸ್ಥಿತಿ. ಅವರ ತಂದೆ ಹೊಲ ಮಾಡಲು ಕೊಡುತ್ತಿರಲಿಲ್ಲ. ಬೆಂಗಳೂರಿನಲ್ಲಿ ಆರಾಮಾಗಿ ಇರು, ನಮ್ಮ ಹಾಗೆ ಯಾಕೆ ಕಷ್ಟ ಪಡುತ್ತೀಯ ಎಂಬುದು ಒಂದು ಕಾರಣವಾದರೆ, ಅವರಿಗೆ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದರು ಅನ್ನುವುದು ಇನ್ನೊಂದು ಬಲವಾದ ಕಾರಣ! ಕೃಷಿಕ ಅಂತ ಗೊತ್ತಾದರೆ ಅವರ ಮದುವೆ ಆಗಲು ಸಾಧ್ಯವೇ ಇರಲಿಲ್ಲ! ಅರೆ ಯಕಶ್ಚಿತ ಒಬ್ಬ ರೈತನನ್ನು ಮದುವೆಯಾಗಲು ಹುಡುಗಿಯರಿಗೇನು ಹುಚ್ಚೆ?!
ಗುರುಪ್ರಸಾದ್ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ