Advertisement

Tag: Kannada Essay

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ