ನೂರಡಿ ರಸ್ತೆಯ ಸಾಹಸಗಳು
ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.