Advertisement

Tag: Ramjan Darga

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

Read More

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

Read More

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ