Advertisement

Tag: Ramjan Darga

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜಾತಿಯೆಂಬ ತಡೆರೇಖೆಗಳನ್ನು ದಾಟಿಕೊಂಡು..

ಬಾಬು ಮಾಮಾನ ಗೆಳೆಯನೊಬ್ಬ ನನ್ನನ್ನು ಪ್ರೀತಿಯಿಂದ ಕಾಣುತ್ತಿದ್ದ. ಎತ್ತಿ ಆಡಿಸುತ್ತಿದ್ದ. ಆತನೊಮ್ಮೆ ಬಾವಿಯಿಂದ ನೀರು ತುಂಬಿಕೊಂಡು ಹೋಗುತ್ತಿದ್ದುದು ಕಾಣಿಸಿತು. ಅವನನ್ನು ಕಂಡೊಡನೆ ಖುಷಿಯಿಂದ ಅವನ ಹಿಂದೆ ಓಡಿದೆ. ಅವನ ಹಳದಿ ರುಮಾಲಿನ ಚುಂಗವನ್ನು ಹಿಡಿದು ‘ಮಾಮಾ’ ಎಂದು ಕೂಗಿದೆ. ಆತನಿಗೆ ಬಹಳ ಸಿಟ್ಟು ಬಂದಿತು. ನನ್ನ ಕಪಾಳಿಗೆ ಹೊಡೆದು ರಸ್ತೆ ಮೇಲೆ ನೀರು ಚೆಲ್ಲಿ ಮತ್ತೆ ಕೊಡ ತುಂಬಲು ಬಾವಿಯ ಮೆಟ್ಟಿಲುಗಳನ್ನು ಇಳಿಯ ತೊಡಗಿದ.”

Read More

ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ

ಬಯಲಾಟದಲ್ಲಿ ದ್ರೌಪದಿ ಪಾತ್ರದ ಗಣಪು ಬಂದು ಒಂದಿಷ್ಟು ಕುಣಿದು ಮಾತನಾಡುವಾಗ ಆತನ ಧ್ವನಿ ಒಡೆದದ್ದು ಗೊತ್ತಾಯಿತು. ರಂಗತಾಲೀಮದಲ್ಲಿ ಮಾತಾಡಿ ಮಾತಾಡಿ ಆತ ಧ್ವನಿ ಕಳೆದುಕೊಂಡಿದ್ದಾನೆಂದು ಅಜ್ಜಿ ನನಗೆ ಹೇಳಿದಳು. ಅಜ್ಜಿಯ ಲಕ್ಷ್ಯ ಹೆಚ್ಚಾಗಿ ಅವನಿಗೆ ಹಾರ ಹಾಕಿ ಒಂದು ರೂಪಾಯಿ ಬಹುಮಾನ ಕೊಡುವುದರ ಕಡೆಗೆ ಇತ್ತು. ಎರಡನೇ ಸಲ ರಂಗದ ಮೇಲೆ ಬಂದಾಗ ಹಾರ ಹಾಕಿ ಬಹುಮಾನ ಕೊಡುವುದಕ್ಕಾಗಿ..”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ