Advertisement

Tag: Ramprakash Rai

ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ

ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ

Read More

ಮಧ್ಯಮ ವರ್ಗ ಮತ್ತು ಬೆಲೆಬಾಳುವ ಕಾಗದದ ಚೂರುಗಳು: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಬ್ಬ ಕಳ್ಳನಿದ್ದಾನೆ’ ಎಂಬ ವಾಕ್ಯ, ‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದು ಮಗುವಿದೆ’ ಎಂದು ಕೋಟಿಯ ಕೈಗಳಲ್ಲಿ ಬದಲಾಗುವುದೇ ಆತನ ವ್ಯಕ್ತಿತ್ವದ ಹೆಚ್ಚುಗಾರಿಕೆಯ ಸಂಕೇತ. ಚಿತ್ರದ ತುಂಬೆಲ್ಲಾ ರೂಪಕಗಳ ಬಳಕೆ ಹೇರಳವಾಗಿದೆ. ಕೋಟಿಯೆಂಬ ಹೆಸರು ಅದರಲ್ಲೊಂದು. ಇಲ್ಲಿ ಎಲ್ಲರೂ ಸಾಗುತ್ತಲೇ ಇರುತ್ತಾರೆ. ಥೇಟು ಪಟ್ಟಣದ ಯಾಂತ್ರಿಕ ಬದುಕಿನಂತೆ. ಆದರೆ ಆ ಪಯಣಕ್ಕೊಂದು ವೇಗ ನಿಯಂತ್ರಕ ಎದುರಾದಾಗ, ಹೇಗೆ ಉತ್ತರಿಸುತ್ತೇವೆ ಎನ್ನುವುದರ ಮೇಲೆ ಬದುಕು ನಿರ್ಧರಿತವಾಗುತ್ತದೆ ಎಂಬುದನ್ನು ನಿರೂಪಿಸಲಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ