Advertisement

Tag: Sudha Adukala

ಮಗಳು ಇಂದಿರಾಗೆ ನೆಹರೂ ಬರೆದ ಮೂರು ಪತ್ರಗಳು

ನಗರಗಳು ಬೆಳೆಯುತ್ತಾ ಹೋದಂತೆ, ಪಟ್ಟಣಗಳು ಮತ್ತು ದೇಶಗಳು ರೂಪುಗೊಳ್ಳತೊಡಗಿದವು. ಒಂದೇ ದೇಶದಲ್ಲಿ ಹತ್ತಿರ ವಾಸಿಸುವ ಜನರು ಪರಸ್ಪರರನ್ನು ಹೆಚ್ಚು ಹೆಚ್ಚು ಅರ್ಥಮಾಡಿಕೊಳ್ಳತೊಡಗಿದರು. ಅವರು ತಮ್ಮಿಂದ ದೂರದಲ್ಲಿ ಬೇರೆ ದೇಶಗಳಲ್ಲಿ ವಾಸಿಸುವ ಜನರಿಗಿಂತ ತಾವೇ ಶ್ರೇಷ್ಟರು ಎಂದು ಯೋಚಿಸತೊಡಗಿದರು. ಜವಾಹರಲಾಲ್‌ ನೆಹರೂ ತಮ್ಮ ಮಗಳು ಇಂದಿರಾಗಾಂಧಿಗೆ ಬರೆದಿದ್ದ ಪತ್ರಗಳನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸಿದ್ದು, ಮಕ್ಕಳ ದಿನಾಚರಣೆಯ ಈ ದಿನ ಅವುಗಳಲ್ಲಿನ ಮೂರು ಪತ್ರಗಳು ನಿಮ್ಮ ಓದಿಗೆ ಇಲ್ಲಿವೆ…

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಅಕ್ಷರಗಳು ಅನಾವರಣಗೊಳಿಸುವ ಸತ್ಯ

ಸಮಾಜದ ಶ್ರೇಣಿಯಲ್ಲಿ ಮೇಲಿನ ಸ್ಥರದಲ್ಲಿ ನಿಂತ ನಮಗೆ ಕೆಳಗೆ ಕಣ್ಣುಹಾಯಿಸಿದಾಗ ಕಂಡುದಷ್ಟೇ ಸತ್ಯ ಎಂಬ ನಮ್ಮ ಭ್ರಮೆಯನ್ನು ಇಲ್ಲಿನ ಪ್ರತಿಯೊಂದು ಸಾಲುಗಳೂ ‘ಚಿತ್’ ಮಾಡುತ್ತಲೇ ಹೋಗುತ್ತವೆ. ನಮ್ಮ ಭ್ರಮಾಲೋಕ ಕಳಚಿದೊಡನೆ ‘ವಾಸ್ತವದ ಕಹಿಸತ್ಯ’ವನ್ನು ಒಂದಿನಿತೂ ಉತ್ಪ್ರೇಕ್ಷೆಯಿಲ್ಲದೆ ನಮ್ಮೆದುರು ತೆರೆದಿಡುತ್ತದೆ. ‘ಇದು ಸತ್ಯ, ಇದು ವಾಸ್ತವ. ನೀನು ಗ್ರಹಿಸಬೇಕಾದುದು ಹೀಗೆ. ಈ ಗ್ರಹಿಕೆಯೊಂದೇ ಸಮಾನತೆಯೆಡೆಗೆ ನಿನ್ನನ್ನೂ, ನನ್ನನ್ನೂ ಕರೆದೊಯ್ಯಬಲ್ಲುದು. ಸಾಧ್ಯವೇನು ನಿನಗೆ?’ ಎಂಬಂತೆ ತಣ್ಣಗೆ ಪ್ರಶ್ನಿಸುತ್ತವೆ.
ದೇವನೂರ ಮಹಾದೇವ ಬರೆದ “ಎದೆಗೆ ಬಿದ್ದ ಅಕ್ಷರ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಭಾಷಾ ಕಲಿಕೆಯ ಕುತೂಹಲಕರ ಆಯಾಮಗಳು

ಭಾಷೆಯನ್ನು ಮಕ್ಕಳು ಮಾತನಾಡಲು,  ವಿಷಯಗಳನ್ನು ತಿಳಿಯಲು ಮಾತ್ರವೇ ಬಳಸುವುದಿಲ್ಲ. ಭಾಷೆಯನ್ನವರು ಓದುವುದು ಮತ್ತು ಬರೆಯುವುದರ ಮೂಲಕ ಮಾತ್ರವೇ ಕಲಿಯುವುದೂ ಇಲ್ಲ. ಅವರ ಅನುಭವಕ್ಕೆ ನಿಲುಕುವ ಪ್ರತಿಯೊಂದು ವಸ್ತುಗಳು ಮತ್ತು ದೈನಂದಿನ ಅನುಭವಗಳ ಮೂಲಕ ಭಾಷೆಯನ್ನು ಕಲಿಯುತ್ತಾ ಹೋಗುತ್ತಾರೆ. ಎಷ್ಟು ಹೊಸ ಅನುಭವಗಳಿಗೆ ತೆರೆದುಕೊಳ್ಳುವರೋ ಅಷ್ಟು ಹೆಚ್ಚು ಪದ ಸಂಪತ್ತು ಮತ್ತು ಭಾಷಾಜ್ಞಾನ ಅವರಲ್ಲಿ ವೃದ್ಧಿಯಾಗುತ್ತ ಸಾಗುತ್ತದೆ. …

Read More

ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ

ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ