Advertisement

Tag: Village life

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಸಾಹೇಬರ ಟೇಪಿನೊಳಗೆ ನೀಲಿಯ ಗೋವಿಂದ: ಸುಧಾ ಆಡುಕಳ ಅಂಕಣ

ಬೇರೆ ದಿನಗಳಲ್ಲಿ ಬಾಯಿ ಮುಚ್ಚದಂತೆ ಸೋಬಾನೆ ಪದ ಹೇಳುವ ಗಣಪಿ, ಗೋಯ್ದು ಎಲ್ಲರನ್ನೂ ಎಷ್ಟು ಒತ್ತಾಯಿಸಿದರೂ ಬಾಯಿಬಿಡಲಿಲ್ಲ. “ಅದ ಪೆಟ್ಟಿಗಿ ಮುಂದೆಲ್ಲ ಹೇಳೂಕೆ ಆಗೂದಿಲ್ವೆ. ಹೆದ್ರೀಕಿ ಬರ್ತದೆ. ದೆನಿ ನಡಗಿ ಗಂಟಲು ಕಟ್ಟೋಯ್ತದೆ. ಮತ್ತೆ ಸಾಯೇಬ್ರು ಕೇಳಿದ್ರೆ ಕಿವಿ ಮುಚ್ಕಬೇಕಾಗೂದು.” ಎನ್ನುತ್ತಾ ಹಾಡಲು ನಿರಾಕರಿಸಿದರು. ಸಾಯೇಬರನ್ನು ನಿರಾಸೆಗೊಳಲಿಸಲು ಇಷ್ಟವಿಲ್ಲದ ನೀಲಿಯ ಅಪ್ಪ ಯಾವುದಾದರೂ ಹಾಡನ್ನು ಹೇಳುವಂತೆ ಮಗಳನ್ನು ಪುಸಲಾಯಿಸಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಎಗ್‌ ರೈಸ್‌ ತಿಂತೀರಿ ಸರ್ರ…?

ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ